ಅಂಫಾನ್ ಚಂಡಮಾರುತ : ಕೋಲ್ಕತ್ತಾದಲ್ಲಿ ವಿಮಾನಗಳ ಸಂಚಾರ ಸ್ಥಗಿತ
ಕೊಲ್ಕತ್ತಾ , ಮೇ, 20,ಅಂಫಾನ್ ಚಂಡಮಾರುತ ಮತ್ತಷ್ಟು ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳು ಸೇರಿದಂತೆ ಎಲ್ಲಾ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಚಂಡಮಾರುತ ಇಂದು ಮಧ್ಯಾಹ್ನ ಅಥವಾ ಸಂಜೆ ಬಂಗಾಳಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ, ಪರಿಣಾಮ ರಾಜ್ಯದ ಅನೇಕ ಕಡೆ ಈಗಾಗಲೇ ಭಾರಿ ಗಾಳಿ, ಮಳೆಯಾಗುತ್ತಿದೆ ಎಂದು ವರದಿಯಾಗಿದೆ.
ಮುಂದಿನ ಕೆಲವು ಗಂಟೆಗಳಲ್ಲಿ ಯಾವುದೆ ಅಪಾಯ ಸಂಭವಿಸುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ,ಪರಿಹಾರ ಕಾರ್ಯಕ್ಕಾಗಿ ಭಾರತೀಯ ಕೋಸ್ಟ್ ಗಾರ್ಡ್ ಹಡಗುಗಳು ಮತ್ತು ವಿಮಾನಗಳನ್ನು ಸಿದ್ಧಗೊಳಿಸಲಾಗಿದೆ. ಒಡಿಶಾದ ವಿಶೇಷ ಪರಿಹಾರ ಆಯುಕ್ತ ಪಿ.ಕೆ.ಜೆನಾ ಮಾತನಾಡಿ, 'ಆಂಫಾನ್ ಚಂಡಮಾರುತವು ಪ್ಯಾರಡೀಪ್ನಿಂದ 110 ಕಿ.ಮೀ ದೂರದಲ್ಲಿದೆ ಮತ್ತು 18-19 ಕಿ.ಮೀ ವೇಗದಲ್ಲಿ ಚಲಿಸುತ್ತಿದೆ. ಒಂದು ಗಂಟೆಯ ಹಿಂದೆ, ಪ್ಯಾರಡೀಪ್ನಲ್ಲಿ 102 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ . ಪಶ್ಚಿಮ ಬಂಗಾಳದ ಸುಂದರ್ಬನ್ಸ್ ಗೆ ಚಂಡಮಾರುತ ಸಂಜೆ ವೇಳೆಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದೂ ಹೇಳಲಾಗಿದೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 