ಸಿಲಿಂಡರ್ ಅಭಾವ: ಆತ್ಮಹತ್ಯೆ ಮಾಡಿಕೊಂಡ ಹೋಟೆಲ್ ಮಾಲೀಕ
Cylinder Abhav: A hotelier who commits suicide
ಬೆಳಗಾವಿ 24: ಅಡುಗೆ ಅನಿಲದ ಅಭಾವದಿಂದ ಹೋಟೆಲ್ ನಡೆಸುವುದು ದುಸ್ತರವಾಗಿದ್ದು, ಇದರಿಂದ ಮನನೊಂದ ವ್ಯಕ್ತಿಯೊಬ್ಬರು ತಮ್ಮ ಹೊಟೆಲಿನಲ್ಲಿಯೇ ನೇಣು ಹಾಕಿಕೊಂಡು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ನಡೆದಿದೆ.
ಹನುಮಾನ ಹೋಟೆಲ್ ಮಾಲೀಕ ರಾಮ ಹಳ್ಳೂರಿ (50) ಆತ್ಮಹತ್ಯೆಗೆ ಶರಣರಾಗಿದ್ದಾರೆ. ಮಂಗಳವಾರ ಮುಂಜಾನೆ ರಾಮ ಹಳ್ಳೂರಿ ತಾನು ನಡೆಸುತ್ತಿದ್ದ ಹೋಟೆಲ್ ತೆರೆದು ಹಗ್ಗದಿಂದ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ. ಅಡುಗೆ ಅನಿಲ ಅಭಾವದಿಂದ ರಾಮ ಹಳ್ಳೂರಿ ವ್ಯಾಪಾರವಿಲ್ಲದೆ ಸಾಲವನ್ನೂ ತೀರಿಸುವುದು ಹೇಗೆಂಬ ಚಿಂತೆಯಲ್ಲಿ ಕಂಗೆಟ್ಟಿದ್ದರು ಎನ್ನಲಾಗಿದೆ.
ರಾಮ ಹಳ್ಳೂರಿಯವರ ಮಗ ಉದಯ ಹಳ್ಳೂರಿ ಮಾಧ್ಯಮಗಳೊಂದಿಗೆ ಮಾತನಾಡಿ ಕಳೆದ ಒಂದು ವಾರದಿಂದ ಅಡುಗೆ ಅನಿಲ ಅಭಾವದಿಂದಾಗಿ ವ್ಯಾಪಾರ ಕುಂಟಿತಗೊಂಡಿತ್ತು, ಪ್ರತಿ ದಿನ ಹೋಟೆಲ್ ಬಾಡಿಗೆ ಮತ್ತು ಸಾಲದ ಮೊತ್ತ ನೀಡಲು ತೊಂದರೆಯಾಗಿತ್ತು ಇದರಿಂದ ಬೇಸತ್ತು ಮಾನಸಿಕ ಸ್ಥಿಮಿತ ಕಳೆದುಕೊಂಡು ಇಂದು ಮುಂಜಾನೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 