ಸಿಲಿಂಡರ್ ಅಭಾವ: ಆತ್ಮಹತ್ಯೆ ಮಾಡಿಕೊಂಡ ಹೋಟೆಲ್ ಮಾಲೀಕ
Cylinder Abhav: A hotelier who commits suicide
ಬೆಳಗಾವಿ 24: ಅಡುಗೆ ಅನಿಲದ ಅಭಾವದಿಂದ ಹೋಟೆಲ್ ನಡೆಸುವುದು ದುಸ್ತರವಾಗಿದ್ದು, ಇದರಿಂದ ಮನನೊಂದ ವ್ಯಕ್ತಿಯೊಬ್ಬರು ತಮ್ಮ ಹೊಟೆಲಿನಲ್ಲಿಯೇ ನೇಣು ಹಾಕಿಕೊಂಡು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ನಡೆದಿದೆ.
ಹನುಮಾನ ಹೋಟೆಲ್ ಮಾಲೀಕ ರಾಮ ಹಳ್ಳೂರಿ (50) ಆತ್ಮಹತ್ಯೆಗೆ ಶರಣರಾಗಿದ್ದಾರೆ. ಮಂಗಳವಾರ ಮುಂಜಾನೆ ರಾಮ ಹಳ್ಳೂರಿ ತಾನು ನಡೆಸುತ್ತಿದ್ದ ಹೋಟೆಲ್ ತೆರೆದು ಹಗ್ಗದಿಂದ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ. ಅಡುಗೆ ಅನಿಲ ಅಭಾವದಿಂದ ರಾಮ ಹಳ್ಳೂರಿ ವ್ಯಾಪಾರವಿಲ್ಲದೆ ಸಾಲವನ್ನೂ ತೀರಿಸುವುದು ಹೇಗೆಂಬ ಚಿಂತೆಯಲ್ಲಿ ಕಂಗೆಟ್ಟಿದ್ದರು ಎನ್ನಲಾಗಿದೆ.
ರಾಮ ಹಳ್ಳೂರಿಯವರ ಮಗ ಉದಯ ಹಳ್ಳೂರಿ ಮಾಧ್ಯಮಗಳೊಂದಿಗೆ ಮಾತನಾಡಿ ಕಳೆದ ಒಂದು ವಾರದಿಂದ ಅಡುಗೆ ಅನಿಲ ಅಭಾವದಿಂದಾಗಿ ವ್ಯಾಪಾರ ಕುಂಟಿತಗೊಂಡಿತ್ತು, ಪ್ರತಿ ದಿನ ಹೋಟೆಲ್ ಬಾಡಿಗೆ ಮತ್ತು ಸಾಲದ ಮೊತ್ತ ನೀಡಲು ತೊಂದರೆಯಾಗಿತ್ತು ಇದರಿಂದ ಬೇಸತ್ತು ಮಾನಸಿಕ ಸ್ಥಿಮಿತ ಕಳೆದುಕೊಂಡು ಇಂದು ಮುಂಜಾನೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 