ಕೆ.ಇ.ಬಿ ಸಭಾಂಗಣದಲ್ಲಿ ಡಿ.ದೇವರಾಜ ಅರಸುರವರ ಜನ್ಮ ದಿನಾಚರಣೆ
D. Devaraj Arasu' birthday celebration at KEB auditorium
ರಾಯಬಾಗ, 20 ; ಸರಳ, ಸಜ್ಜನಿಕೆಯ ಧೀಮಂತ ನಾಯಕ ಡಿ.ದೇವರಾಜ ಅರಸು ಅವರ ಜೀವನ ನಮಗೆಲ್ಲ ಆದರ್ಶಪ್ರಾಯವಾಗಿದೆ ಎಂದು ತಹಶೀಲ್ದಾರ ಸುರೇಶ ಮುಂಜೆ ಹೇಳಿದರು.
ಬುಧವಾರ ಪಟ್ಟಣದ ಕೆ.ಇ.ಬಿ ಸಭಾಂಗಣದಲ್ಲಿ ತಾಲೂಕಾ ಆಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ, ಸಾಮಾಜಿಕ ಕ್ರಾಂತಿಯ ಹರಿಕಾರ ಡಿ.ದೇವರಾಜ ಅರಸುರವರ 110ನೇ ಜನ್ಮ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಅರಸುರವರು ತಮ್ಮ ಅಧಿಕಾರಾವಧಿಯಲ್ಲಿ ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸಿ, ಜನಪರ ಆಡಳಿತ ನೀಡಿದ್ದಾರೆ.
ಅವರ ಜೀವನ ಆದರ್ಶವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನಡೆಯಬೇಕೆಂದರು. ವಕೀಲ ರಮೇಶಕುಮಾರ ಘಂಟಿ ಮಾತನಾಡಿ, ಶೋಷಿತ, ಅತೀ ಹಿಂದುಳಿದ ಮತ್ತು ತಳ ವರ್ಗದ ಜನರಿಗೆ ಅನೇಕ ಸೌಲಭ್ಯ ಕಲ್ಪಿಸುವುದರ ಮೂಲಕ ಸಾಮಾಜಿಕ ನ್ಯಾಯ ಒದಗಿಸಿದವರು ದೇವರಾಜ ಅರಸುರವರು ಸಾಮಾಜಿಕ ಕ್ರಾಂತಿಯ ಹರಿಕಾರ ಅನ್ನಿಸಿಕೊಂಡಿದ್ದಾರೆ. ಭೂಮಿಯನ್ನು ಉಳುವವನೆ ಭೂ ಒಡೆಯ ಕಾಯ್ದೆಯನ್ನು ಪರಿಣಾಮಕಾರಿ ಜಾರಿಗೆ ತಂದ ಧೀಮಂತ ನಾಯಕ ಅರಸುರವರು, ಇಂದಿಗೂ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು. ಹಿಂ.ವ.ಕಲ್ಯಾಣ ಇಲಾಖೆ ನಿವೃತ್ತ ಅಧಿಕಾರಿ ಆರ್.ಎಸ್.ಪಾಟೀಲ ಅವರನ್ನು ಸತ್ಕರಿಸಲಾಯಿತು. ಸಮಾರಂಭದಲ್ಲಿ ಪ.ಪಂ.ಅಧ್ಯಕ್ಷ ಅಶೋಕ ಅಂಗಡಿ, ಬಿಇಒ ಬಸವರಾಜಪ್ಪ ಆರ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್. ಎಮ್.ಪಾಟೀಲ, ಪಿಡಬ್ಲ್ಯುಡಿ ಎಇಇ ಆರಿ್ಬ. ಮನವಡ್ಡರ, ಜಿ.ಪಂ.ಎಇಇ ವಿ.ಆರ್, ಭಜಂತ್ರಿ, ಸುರೇಶ ಮಲಾಜ, ಎಚ್.ಎಲ್.ಪೂಜಾರಿ, ಸಿದ್ದು ಪೂಜಾರಿ, ಏಕನಾಥ ಮಾಚಕನೂರ, ಅನೀಲ ಬೊಮ್ಮನವರ, ಸೇರಿ ಇಲಾಖೆ ಸಿಬ್ಬಂದಿ, ವಿದ್ಯಾರ್ಥಿಗಳ ಇದ್ದರು.ತಾ.ಹಿಂ.ವ.ಕಲ್ಯಾಣ ಅಧಿಕಾರಿ ಕಲ್ಪನಾ ಕಾಂಬಳೆ ಸ್ವಾಗತಿಸಿದರು, ಶಿಕ್ಷಕ ಬಿ.ಎಲ್.ಘಂಟಿ ನಿರೂಪಿಸಿದರು,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 