ಸಾಮಾಜಿಕ ಅಂತರ ಕಾಯ್ದುಕೊಳ್ಳಲು ರಾಣೇಬೆನ್ನೂರು ವರ್ತಕರಿಗೆ ಡಿಸಿ ಕೃಷ್ಣ ಬಾಜಪೇಯಿ ಸಲಹೆ
ಹಾವೇರಿ:ಎ. 03: ರಾಣೇಬೆನ್ನೂರು ಮಾರುಕಟ್ಟೆಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ವರ್ತಕರೊಂದಿಗೆ ಮಾತನಾಡಿ, ಕರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಾಗೃತಿ ಮೂಡಿಸಿದರು.
ಶುಕ್ರವಾರ ಬೆಳಿಗ್ಗೆ ಮಾರುಕಟ್ಟೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಕಡ್ಡಾಯವಾಗಿ ಪ್ರತಿ ಮಾರಾಟ ಸ್ಥಳದಲ್ಲಿ ಅಂತರವನ್ನು ಕಾಪಾಡಿಕೊಳ್ಳಬೇಕು. ಸಾಮಾಜಿಕ ಅಂತರದೊಂದಿಗೆ ತರಕಾರಿ ಖರೀದಿಗೆ ಜನರಿಗೆ ಮಾರ್ಗದರ್ಶನ ಮಾಡಬೇಕು ಎಂದು ಸಲಹೆ ನೀಡಿದರು.
ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಉಪವಿಭಾಗಾಧಿಕಾರಿ ಡಾ.ದಿಲೀಷ್ ಶಶಿ, ತಹಶೀಲ್ದಾರ ಬಸವನಗೌಡ, ಪೌರಾಯುಕ್ತ ಡಾ.ಮಹಾಂತೇಶ ಇತರರು ಉಪಸ್ಥಿತರಿದ್ದರು.
ಹೊರ ಜಿಲ್ಲೆಗೆ ರೈತರ ಉತ್ಪನ್ನ: ತೋಟಗಾರಿಕೆ ಇಲಾಖೆಯ ಸಹಕಾರದೊಂದಿಗೆ ಜಿಲ್ಲೆಯ ರೈತರ ತೋಟಗಾರಿಕಾ ಉತ್ಪನ್ನಗಳನ್ನು ದೆಹಲಿ, ಶಿವಮೊಗ್ಗ, ಬಾಗಲಕೋಟೆ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಿಗೆ ರಫ್ತುಮಾಡಲಾಗಿದೆ.
ಜಿಲ್ಲೆಯ ರೈತರು ಬೆಳೆದ ಶುಂಠಿಯನ್ನು ದೆಹಲಿಗೆ 16 ಮೆಟ್ರಿಕ್ ಟನ್, ಶಿವಮೊಗ್ಗ ನಾಲ್ಕು ಮೆ.ಟನ್, ಹುನಗುಂದಕ್ಕೆ ಎರಡು ಮೆ.ಟನ್ ಶುಂಠಿಯನ್ನು ಕಳುಹಿಸಲಾಗಿದೆ. ಗೋವಾ ರಾಜ್ಯಕ್ಕೆ ಐದು ಮೆಟ್ರಿಕ್ ಟನ್ ಕಲ್ಲಂಗಡಿ ಹಣ್ಣನ್ನು ಕಳುಹಿಸಲಾಗಿದೆ. ದಾವಣಗೆರೆ ಹಾಗೂ ಚಿತ್ರದುರ್ಗಕ್ಕೆ ಒಂದು ಮೆಟ್ರಿಕ್ ಟನ್ ಪೇರಲ ಹಣ್ಣನ್ನು ಕಳುಹಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿದರ್ೆಶಕ ಡಾ.ಪ್ರದೀಪ ಅವರು ತಿಳಿಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 