ಹಾವೇರಿ:13: ಜಿಲ್ಲೆಯಲ್ಲಿ ತೆರೆಯಲಾದ ಕ್ವಾರಂಟೈನ್ ಕೇಂದ್ರಗಳ ನಿರ್ವಹಣೆಯಲ್ಲಿ ಯಾವುದೇ ಲೋಪವಾಗದಂತೆ ಗರಿಷ್ಠ ಎಚ್ಚರಿಕೆ ವಹಿಸಬೇಕು. ಪ್ರಾಮಾಣಿತ ಕಾಯರ್ಾಚರಣೆ ವಿಧಾನದಂತೆ(ಎಸ್.ಓ.ಪಿ.) ಸ್ವಚ್ಛತೆ ಇನ್ನಿತರ ಮುನ್ನೆಚ್ಚರಿಕೆ ನಿಯಮ ಕಟ್ಟುನಿಟ್ಟಾಗಿ ಪಾಲನೆಮಾಡಬೇಕು. ಈ ಕೇಂದ್ರಗಳಿಂದ ಕೋವಿಡ್ ಸೋಂಕು ಹರಡದಂತೆ ಕಾಳಜಿಸಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಸೂಚನೆ ನೀಡಿದರು.
ತಾಲೂಕಾ ತಹಶೀಲ್ದಾರ ಹಾಗೂ ಕ್ವಾರಂಟೈನ್ ಕೇಂದ್ರಗಳ ನೋಡಲ್ ಅಧಿಕಾರಿಗಳೊಂದಿಗೆ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಚೆಕ್ಪೋಸ್ಟ್ ಹಾಗೂ ಕ್ವಾರಂಟೈನ್ ಕೇಂದ್ರಗಳ ಕಾರ್ಯವಿಧಾನದ ಮಾಹಿತಿ ಪಡೆದುಕೊಂಡರು.
ಜಿಲ್ಲೆಯ ಗಡಿಭಾಗದ ಚೆಕ್ಪೋಸ್ಟ್ಗಳಲ್ಲಿ ಒಳಬರುವ ಪ್ರಯಾಣಿಕರನ್ನು ಕಡ್ಡಾಯವಾಗಿ ಸ್ಕ್ರಿನಿಂಗ್ ಮಾಡಬೇಕು. ತಪಾಸಣೆಯಲ್ಲಿ ಕೊಂಚ ಸಡಿಲವಾದರೂ ಕೋವಿಡ್ ಸೋಂಕು ಹರಡುವಿಕೆಯ ಅಪಾಯ ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಚೆಕ್ ಪೋಸ್ಟ್ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೋಡಲ್ ಅಧಿಕಾರಿಗಳು, ಸಿಬ್ಬಂದಿಗಳು ಪರಿಸ್ಥಿತಿ ಅಥರ್ೈಸಿಕೊಂಡು ಗಂಭೀರವಾಗಿ ಕರ್ತವ್ಯ ನಿರ್ವಹಿಸಲು ಸೂಚನೆ ನೀಡಿದರು.
ವಿದೇಶದಲ್ಲಿ ನೆಲೆಸಿರುವ ರಾಜ್ಯದವರು ಮರಳಿ ರಾಜ್ಯಕ್ಕೆ ಕರೆತರುವ ಪ್ರಕ್ರಿಯೆ ನಡೆದಿದೆ. ಈ ಪೈಕಿ ಜಿಲ್ಲೆಗೆ ಬರುವವರನ್ನು ಹಾಗೆಯೇ ದೇಶದ ನಾನಾ ಭಾಗದಿಂದ ಜಿಲ್ಲೆಗೆ ಹಿಂತಿರುಗುತ್ತಿದ್ದಾರೆ. ಈ ಎಲ್ಲರನ್ನು ಸ್ಟ್ಯಾಂಡಡರ್್ ಆಪರೇಷನ್ ಪ್ರೊಸಿಸರ್ (ಎಸ್.ಓ.ಪಿ.) ಮಾರ್ಗಸೂಚಿ ಅನುಸಾರ ಕ್ವಾರಂಟೈನ್ಗಳಲ್ಲಿ ಇರಿಸಬೇಕಾಗಿದೆ. ಈ ಸಂದರ್ಭ ಅತ್ಯಂತ ಸೂಕ್ಷ್ಮವಾಗಿದ್ದು, ಮುಂದಿನ 15 ದಿಗಳವರೆಗೆ ಕ್ವಾರಂಟೈನ್ ಕೇಂದ್ರಗಳ ನಿರ್ವಹಣೆಯಲ್ಲಿ ಹೆಚ್ಚಿನ ಕಾಳಜಿ ವಹಿಸಿ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.
ಕ್ವಾರಂಟೈನ್ ಕೇಂದ್ರಗಳ ನಿರ್ವಹಣೆ ಕುರಿತಂತೆ ಸಾರ್ವಜನಿಕರಿಂದ ದೂರುಗಳು ಬರಬಾರದು. ಸ್ವಚ್ಛತೆಗೆ ಆದ್ಯತೆ ನೀಡಬೇಕು, ಶುದ್ಧ ಕುಡಿಯುವ ನೀರು ಹಾಗೂ ಆಹಾರ ಪೂರೈಕೆ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಅಗತ್ಯ ಕ್ರಮಕೈಗೊಳ್ಳಬೇಕು. ಅನುದಾನದ ಅಗತ್ಯತೆ, ಆಹಾರ ಸಾಮಾಗ್ರಿ, ಹೆಚ್ಚುವರಿ ಸಿಬ್ಬಂದಿ, ಸ್ವಚ್ಛತಾ ಕಾರ್ಯದ ಸಿಬ್ಬಂದಿ ಒಳಗೊಂಡಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ವಯಕ್ತಿಕ ಗಮನಕ್ಕೆ ತರುವಂತೆ ತಿಳಿಸಿದರು.
ಹೊರ ದೇಶ ಹಾಗೂ ಹೊರರಾಜ್ಯದಿಂದ ಬರುವವರಿಗೆ ಕ್ವಾರಂಟೈನ್ ಕಡ್ಡಾಯವಾಗಿದೆ. ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಉಳಿಯಲು ಇಚ್ಛಿಸದೇ ಹೆಚ್ಚಿನ ಸೌಲಭ್ಯ ಬಯಸಿದರೆ ಅವರ ಇಚ್ಛಾನುಸಾರ ಪ್ರತ್ಯೇಕ ಹೋಟೆಲ್ನಲ್ಲಿ ಸ್ವಂತ ವೆಚ್ಚ ಭರಿಸಿ ಕ್ವಾರಂಟೈನ್ ಆಗಲು ಅವಕಾಶವಿದೆ. ಎಸ್.ಓ.ಪಿ. ಮಾರ್ಗಸೂಚಿ ಅನುಸಾರ ಆರೋಗ್ಯ ತಪಾಸಣೆ ನಂತರ ಹೋಟೆಲ್ನಲ್ಲಿ ವಾಸ್ತವ್ಯ ಹೂಡಬಹುದು. ಈ ಉದ್ದೇಶಕ್ಕಾಗಿ ತಹಶೀಲ್ದಾರಗಳು ಉತ್ತಮವಾದ ಮೂರ್ನಾಲ್ಕು ಹೋಟೆಲ್ ಗುರುತಿಸಿಕೊಂಡು 14 ದಿನಗಳ ಕ್ವಾರಂಟೈನ್ ಅವಧಿಯ ಕೊಠಡಿ ಬಾಡಿಗೆ, ಊಟ, ವಸತಿ ಸೇರಿ ಪ್ಯಾಕೇಜ್ ದರ ಅಥವಾ ಪ್ರತಿ ದಿನದ ದರ ನಿಗಧಿಪಡಿಸಿ ಅಧಿಸೂಚನೆ ಹೊರಡಿಸಬೇಕು.
ಈ ಮಾಹಿತಿ ಪ್ರಯಾಣಿಕರಿಗೆ ನೀಡಬೇಕು ಕ್ವಾರಂಟೈನ್ಗೆ ಒಳಗಾದವರ ಆಯ್ಕೆ ಅನುಸಾರ ಹೋಟೆಲ್ಗೆ ಸ್ಥಳಾಂತರಿಸಬೇಕು. ಇವರ ಮೇಲೆ ನಿವಾಗವಹಿಸಲು ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ, ಉಪವಿಭಾಗಾಧಿಕಾರಿ ಡಾ.ದಿಲೀಷ್ ಶಶಿ, ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಇಲಾಖೆ ಉಪನಿದರ್ೆಶಕ ವಿನೋದಕುಮಾರ ಹೆಗ್ಗಳಗಿ, ಸಮಾಜ ಕಲ್ಯಾಣಾಧಿಕಾರಿ ಚೈತ್ರಾ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ವೀರೇಂದ್ರ ಕುಂದಗೋಳ, ಪೌರಾಯುಕ್ತ ಬಸವರಾಜ ಜಿದ್ದಿ, ತಹಶೀಲ್ದಾರ ಶಂಕರ್, ತಾಲೂಕಾ ಪಂಚಾಯತಿ ಕಾರ್ಯನಿವರ್ಾಹಣಾಧಿಕಾರಿ ಬಸವರಾಜ ಹಾಗೂ ವಿವಿಧ ತಾಲೂಕಿನ ತಹಶೀಲ್ದಾರಗಳು, ತಾಲೂಕಾ ಪಂಚಾಯತ್ ಕಾರ್ಯನಿವರ್ಾಹಣಾಧಿಕಾರಿಗಳು ಭಾಗವಹಿಸಿದ್ದರು.