ಸ್ವಚ್ಛತೆ, ಲೈಟಿಂಗ್ ವ್ಯವಸ್ಥೆಗೆ ಡಿಸಿ ತಾಕೀತು

ಹಾವೇರಿ: ಕುಡಿಯುವ ನೀರು  ಪೂರೈಕೆ, ನಗರದ ನಿಯಮಿತ ಸ್ವಚ್ಛತೆ, ಹಾಳಾದ ಬೀದಿ ದೀಪಗಳನ್ನು ಸಕಾಲದಲ್ಲಿ ಅಳವಡಿಸಲು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ತಾಕೀತು ಮಾಡಿದ್ದಾರೆ.

ಗುರುವಾರ ಕುಡಿಯುವ ನೀರು ಸರಬರಾಜು ಘಟಕದ ಪ್ಲಾಂಟಿಗೆ  ಭೇಟಿ ನೀಡಿದ ಜಿಲ್ಲಾಧಿಕಾರಿಗಳು ನಿಯಮಿತವಾಗಿ ಸ್ವಚ್ಛತೆ ಹಾಗೂ ಕ್ಲೋರಿನ್ ಹಾಕಲು ಸೂಚಿಸಿದ ಅವರು ನಿಯಮಿತವಾಗಿ ನೀರು ಸರಬರಾಜಿಗೆ ಸೂಚನೆ ನೀಡಿದರು.

ನಗರದ ಬೀದಿ ದೀಪಗಳು ಹಾಳಾದರು ಸಕಾಲದಲ್ಲಿ ಅಳವಡಿಸಿರುವುದಿಲ್ಲ, ನಗರದ ಬಹುಕಡೆಗಳಲ್ಲಿ ವಿದ್ಯುತ್ ದೀಪಗಳಿಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗಿದೆ. 

  ಮೂರು ದಿನಗದೊಳಗಾಗಿ  ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಸೂಚನೆ ನೀಡಿದರು.

ಬೀದಿ ಸ್ವಚ್ಛತೆ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಕಾಲುವೆಗಳ ಸ್ವಚ್ಛತೆಯನ್ನು ನಿಯಮಿತವಾಗಿ ಕೈಗೊಳ್ಳುವುದು ಸಮರ್ಪಕವಾಗಿ ಕಸ ವಿಲೇವಾರಿಗೊಳಿಸುವಂತೆ ಸೂಚಿಸಿದರು.

ನಗರಸಭೆ ಕಚೇರಿಯಲ್ಲಿ ಅಧಿಕಾರಿ-ಸಿಬ್ಬಂದಿಗಳ ಸಭೆ ನಡೆಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಡತವಿಲೇವಾರಿ ಮಾಡಿ, ತೆರಿಗೆ ಸಂಗ್ರಹ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ನಗರಸಭೆಯಿಂದ ಕೈಗೊಳ್ಳಲಾದ ಕಾಮಗಾರಿಗಳ ವಿವಿಧ ಹಂತಗಳ ಕುರಿತಂತೆ ಪರಿಶೀಲನೆ ನಡೆಸಿ ಮಾಹಿತಿ ಪಡೆದು ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.ಸಭೆಯಲ್ಲಿ ಪೌರಾಯುಕ್ತ ಬಸವರಾಜ ಜಿದ್ದಿ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.