ಡಾ. ಮಹದೇವ ಬಣಕಾರ ಸಾಂಸ್ಕೃತಿಕ ಭವನ ಕಾಮಗಾರಿ ಪರೀಶೀಲಿಸಿದ ಡಿಸಿ
DC inspects the work of Dr. Mahadeva Banakara Cultural House
ಡಾ. ಮಹದೇವ ಬಣಕಾರ ಸಾಂಸ್ಕೃತಿಕ ಭವನ ಕಾಮಗಾರಿ ಪರೀಶೀಲಿಸಿದ ಡಿಸಿ
ಹಾವೇರಿ 25 : ನಗರದ ಬಸವೇಶ್ವರ ಬಡಾವಣೆಯ 3ನೇ ಅಡ್ಡ ರಸ್ತೆ ಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅನುದಾನದಡಿಯಲ್ಲಿ ರೂ. 2.00 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಡಾ. ಮಹದೇವ ಬಣಕಾರ ಸಾಂಸ್ಕೃತಿಕ ಭವನದ ಕಾಮಗಾರಿಯನ್ನು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ ಭೇಟಿ ನೀಡಿ ಪರೀಶೀಲಿಸಿದರು. ಕಟ್ಟಡ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಮುಗಸಿ, ಕಟ್ಟಡದಲ್ಲಿ ಸುಸಜ್ಜಿತವಾದ ಗ್ರಂಥಾಲಯ ನಿರ್ಮಾಣಮಾಡಿ, ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ವಸ್ತುಗಳು ಗುಣಮಟ್ಟದಿಂದ ಕೂಡಿರಬೇಕು ಕಟ್ಟಡ ಮುಗಿಸುವ ಭರದಲ್ಲಿ ಕಳಪೆ ವಸ್ತುಗಳನ್ನು ಭರಿಸದಂತೆ ಎಚ್ಚರವಹಿಸಿ ನಿರ್ಮಾಣ ಮಾಡಬೇಕು ಹಾಗೂ ವಿವಿಧ ಸಂಸ್ಕೃತಿ ಕಾರ್ಯಕ್ರಮ ಹಾಗೂ ಇನ್ನಿತರೆ ಕಾರ್ಯಾಚಟುವಟಿಕೆಗಳ ಉಪಯೋಗಕ್ಕೆ ಕಟ್ಟಡ ಅನುಕೂಲವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್. ಎಫ್. ಗಾಜಿಗೌಡ್ರ , ನಗರಸಭೆ ಸದಸ್ಯರಾದ ಸಂಜೀವ ನೀರಲಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವೀರಯ್ಯ ಸ್ವಾಮಿ ಹಿರೇಮಠ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ತಿಮ್ಮೆಶಕುಮಾರ ಹಾಗೂ ಹಾಗೂ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 