ಹಾವೇರಿ: ಜೂನ್09: ಪರೀಕ್ಷಾ ಮಾಹಿತಿಯ ಕೊರತೆ ಹಾಗೂ ಸಾರಿಗೆ ಅನಾನುಕೂಲ ಕಾರಣದಿಂದ ಜಿಲ್ಲೆಯಲ್ಲಿ ಯಾವುದೇ ವಿದ್ಯಾಥರ್ಿ ಎಸ್.ಎಸ್.ಎಲ್.ಸಿ ವಾಷರ್ಿಕ ಪರೀಕ್ಷೆಯಿಂದ ವಂಚಿತವಾಗಬಾರದು. ಪ್ರತಿ ವಿದ್ಯಾಥರ್ಿಗಳ ವಯಕ್ತಿಕ ಸಂಪರ್ಕ ಸಾಧಿಸಿ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಕ್ಕೆ ಬರುವ ಸಂಪರ್ಕ ಕುರಿತಂತೆ ಮಾಹಿತಿ ಹೊಂದಬೇಕು. ಸಾರಿಗೆ ಅನಾನುಕೂಲದಿಂದ ಬರಲಾಗಿಲ್ಲ ಎಂಬ ದೂರುಗಳು ಬಂದರೆ ಶಾಲಾ ಮುಖ್ಯೋಪಾಧ್ಯಾಯರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಎಚ್ಚರಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವ ಸಿದ್ಧತೆ, ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಪರೀಕ್ಷಾ ಸಿದ್ಧತೆ, ವಿದ್ಯಾಥರ್ಿಗಳಿಗೆ ಸಾರಿಗೆ ಸೌಕರ್ಯ ಕುರಿತಂತೆ ಜಿಲ್ಲೆಯ ಶಿಕ್ಷಣಾಧಿಕಾರಿಗಳು ಹಾಗೂ ಪರೀಕ್ಷಾ ಸಿದ್ಧತೆಗೆ ಪೂರಕ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಇದೇ ಜೂನ್ 25 ರಿಂದ ಜುಲೈ 03ವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದೆ. ಕೋವಿಡ್ ಎಸ್.ಓ.ಪಿ. ಪ್ರಕಾರ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮೂರು ದಿನ ಮುಂಚಿತವಾಗಿ ಕೇಂದ್ರಗಳ ಸ್ವಚ್ಛತೆ, ಸ್ಯಾನಿಟೈಸೇಷನ್ ಮಾಡಬೇಕು. ಪ್ರತಿ ದಿನ ಸ್ಯಾನಿಟೈಸೇಷನ್ ಮಾಡಬೇಕು. ಒಬ್ಬರಿಂದ ಒಬ್ಬರಿಗೆ ಕನಿಷ್ಠ ಮೂರುವರೆ ಅಡಿ ಅಂತರ ಕಾಪಾಡಿ ವಿದ್ಯಾಥರ್ಿಗಳನ್ನು ಕೂರಿಸಬೇಕು. ಎಲ್ಲರಿಗೂ ಸ್ಕ್ರೀನಿಂಗ್ ಮಾಡಬೇಕು. ಪ್ರತಿ ವಿದ್ಯಾಥರ್ಿಗೂ ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಜ್ವರ, ಕೆಮ್ಮಿನ ಲಕ್ಷಣಗಳು ಅಥವಾ ಕಂಟೋನ್ಮೆಂಟ್ ಕೇಂದ್ರದಿಂದ ಬರುವ ಪರೀಕ್ಷಾಥರ್ಿಗಳಿಗೆ ವಿಶೇಷ ಕೊಠಡಿ ವ್ಯವಸ್ಥೆ ಮಾಡಿ ಮಾರ್ಗ ಸೂಚಿಯಂತೆ ಆರು ಅಡಿ ಅಂತರದಲ್ಲಿ ಮಕ್ಕಳು ಪರೀಕ್ಷೆ ಬರೆಯಲು ಮುನ್ನೆಚ್ಚರಿಕೆ ವಹಿಸಬೇಕು. ಕೋವಿಡ್ ಸುರಕ್ಷತೆಯ ಗರಿಷ್ಠ ಕ್ರಮಗಳನ್ನು ಪ್ರತಿ ಕೇಂದ್ರಗಳಲ್ಲೂ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರಗಳಿಗೆ ವಿವಿಧ ಹಳ್ಳಿಗಳಿಂದ ಆಗಮಿಸುವ ವಿದ್ಯಾಥರ್ಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆಯನ್ನು ಕೈಗೊಳ್ಳಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳೊಂದಿಗೆ ಕುಳಿತು ಸಮನ್ವಯದಿಂದ ಬಸ್ ಓಡುವ ಮಾರ್ಗಗಳು, ಸಮಯ ನಿಗಧಿಮಾಡಬೇಕು. ಒಂದೇ ಗ್ರಾಮ ಅಥವಾ ಶಾಲೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೆಚು ವಿದ್ಯಾಥರ್ಿಗಳಿದ್ದರೆ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಬೇಕು. ಸಾರಿಗೆ ಮಾರ್ಗಗಳಿಲ್ಲದ ಊರುಗಳಿಗೆ ಖಾಸಗಿ ಶಾಲಾ ಬಸ್ಗಳು ವಾಹನಗಳ ವ್ಯವಸ್ಥೆ ಮಾಡಬೇಕು. ಈ ಕುರಿತಂತೆ ಪಾಲಕರು ವಿದ್ಯಾಥರ್ಿಗಳು ಸಂಪಕರ್ಿಸಲು ಅನುಕೂಲವಾಗುವಂತೆ ಸಹಾಯವಾಣಿಗಳನ್ನು ಸ್ಥಾಪಿಸಿ ಸಂಪರ್ಕ ಸಂಖ್ಯೆಗಳನ್ನು ವಿನಿಮಯ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಯಾವ ವಿದ್ಯಾಥರ್ಿಗಳು ಯಾವ ಕೇಂದ್ರ, ಯಾವ ನೋಂದಣಿ ಸಂಖ್ಯೆ, ಯಾವ ಕೇಂದ್ರದ ಎಷ್ಟೇ ಕೊಠಡಿಯಲ್ಲಿದೆ ಎಂಬ ಮಾಹಿತಿಯನ್ನು ಮುಂಚಿತವಾಗಿಯೇ ವಾಟ್ಸಾಪ್ ಗ್ರೂಪ್, ವೆಬ್ಸೈಟ್ ಹಾಗೂ ಎಲ್ಲ ಶಾಲೆಗಳ ನೋಟಿಸ್ ಬೋಡರ್್ನಲ್ಲಿ ಪ್ರಕಟಿಸಬೇಕು. ಎಲ್ಲೂ ಗುಂಪು ಸೇರದಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸ್ಕೌಟ್ಸ್ ಆಂಡ್ ಗೈಡ್ಸ್ ಕಾಲೇಜ್ ವಿದ್ಯಾಥರ್ಿಗಳನ್ನು ಬಳಸಿಕೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ ದೇಸಾಯಿ ಅವರು ಮಾತನಾಡಿ, ವಾಹನ ವ್ಯವಸ್ಥೆ ಇಲ್ಲದೆ ಒಂದೇ ಒಂದು ಮಗು ಪರೀಕ್ಷೆಯಿಂದ ವಂಚಿತವಾಗಬಾರದು. ವಿದ್ಯಾಥರ್ಿಗಳ ಸಮಯಕ್ಕೆ ಸರಿಯಾಗಿ ಬಸ್ ಓಡಿಸಬೇಕು. ಎಂದು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ ಅವರು ಮಾತನಾಡಿ, ಜಿಲ್ಲೆಯಲ್ಲಿ 22,511 ವಿದ್ಯಾಥರ್ಿಗಳು ನೊಂದಾಯಿಸಿಕೊಂಡಿದ್ದಾರೆ. 695 ಹೊರ ಜಿಲ್ಲೆಯವರು ಈ ಜಿಲ್ಲೆಯಲ್ಲಿ ಹಾಗೂ ಈ ಜಿಲ್ಲೆಯಿಂದ 407 ವಿದ್ಯಾಥರ್ಿಗಳು ಹೊರ ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಾಗಲು ಬದಲಾಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ 75 ಮುಖ್ಯ ಪರೀಕ್ಷಾ ಕೇಂದ್ರಗಳು, 15 ಬ್ಲಾಕ್ ಕೇಂದ್ರಗಳನ್ನು ಗುರುತಿಸಲಾಗಿದೆ. 1420 ಕೊಠಡಿಗಳನ್ನು ಸಿದ್ಧಮಾಡಿಕೊಳ್ಳಲಾಗಿದೆ. 1006 ಕೊಠಡಿಗಳಿಗೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. 75 ಮುಖ್ಯ ಕೊಠಡಿಗಳಿಗೆ, 91 ಕೇಂದ್ರಗಳ ಕಾರಿಡಾರ್ಗಳಿಗೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. 75 ಮುಖ್ಯ ಅಧೀಕ್ಷಕರು, 75 ಪ್ರಶ್ನೆ ಪತ್ರಿಕೆ ಪಾಲಕರು, 29 ಮಾರ್ಗಗಳಿಗೆ ಮಾಗರ್ಾಧಿಕಾರಿಗಳು ಹಾಗೂ 75 ಮೊಬೈಲ್ ಸ್ವಾಧಿನಾಧಿಕಾರಿಗಳು ಹಾಗೂ 75 ಸ್ಥಾನಿಕ ಜಾಗೃತದಳದ ಅಧಿಕಾರಿಗಳನ್ನು ನೇಮಕಮಾಡಲಾಗಿದೆ. ವಿದ್ಯಾಥರ್ಿಗಳು ಸೇರಿದಂತೆ ಪರೀಕ್ಷಾ ಮೇಲ್ವಿಚಾರಕರಿಗೂ ಕೇಂದ್ರದೊಳಗೆ ಮೊಬೈಲ್ ಅಥವಾ ಯಾವುದೇ ಎಲೆಕ್ಟ್ರಾನಿಕ್ಸ್ ಡಿವೈಸ್ ತೆಗೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ. ಕೋವಿಡ್ ಮಾರ್ಗಸೂಚಿಯಂತೆ ಎಲ್ಲ ಮುನ್ನೆಚ್ಚರಿಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ವಿದ್ಯಾಥರ್ಿಗಳಿಗೆ ಸಾರಿಗೆ ವ್ಯವಸ್ಥೆ ತೊಂದರೆಯಾಗದಂತೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಾರ್ವಜನಿಕರ ಸಂಪರ್ಕಕ್ಕೆ 9480574530 ಸಹಾಯವಾಣಿ ಸ್ಥಾಪಿಸಲಾಗಿದೆ. ಪ್ರತಿ ಕೇಂದ್ರಕ್ಕೆ ಆರೋಗ್ಯ ಸಹಾಯಕರ ನೇಮಕ, ಸ್ಥಳೀಯ ಸಂಸ್ಥೆಗಳಿಂದ ಪರೀಕ್ಷಾ ಕೇಂದ್ರಗಳ ಸ್ವಚ್ಛತೆ ಸೇರಿದಂತೆ ಗರಿಷ್ಠ ಸುಕರ್ಷತಾ ಮುನ್ನೆಚ್ಚರಿಕೆ ಕ್ರಮಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜೂನ್ 25 ರಿಂದ ಜುಲೈ 3ರವರೆಗೆ ನಡೆಯುವ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದ ವಿದ್ಯಾಥರ್ಿಗಳು ಜುಲೈ ತಿಂಗಳಲ್ಲಿ ನಡೆಯುವ ಪೂರ್ವ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. ಈ ಪರೀಕ್ಷೆಗೆ ಹಾಜರಾಗುವವರನ್ನು ರಿಪಿಟರ್ಸ್ ಎಂದು ಪರಿಗಣಿಸದೇ ಹೊಸ ವಿದ್ಯಾಥರ್ಿಗಳೆಂದೇ ಪರಿಗಣಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾಜರ್ುನ ಬಾಲದಂಡಿ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಜಯಾನಂದ, ಜಿಲ್ಲಾ ಡಯಟ್ ಪ್ರಿನ್ಸಿಪಾಲ್ ಜಿ.ಎಂ.ಬಸವಣ್ಣೆಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಸಮಾಜ ಕಲ್ಯಾಣ ಇಲಾಖೆ ಉಪನಿದರ್ೆಶಕಿ ಶ್ರೀಮತಿ ಚೈತ್ರಾ, ವಾಯವ್ಯ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಮುಜುಂದಾರ, ವಿವಿಧ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.