ಆಶಾ ಕಾರ್ಯಕರ್ತೆ ನಿವಾಸಕ್ಕೆ ಡಿಸಿಎಂ ಡಾ. ಅಶ್ವತ್ಥ ನಾರಾಯಣ ಭೇಟಿ: ದೂರು ಸ್ವೀಕರಿಸದ ಪೊಲೀಸರ ವಿರುದ್ಧ ಕ್ರಮಕ್ಕೆ ಸೂಚನೆ
ಬೆಂಗಳೂರು, ಏ. 2,ಬೆಂಗಳೂರಿನ ಹೆಗಡೆ ನಗರ ಸಮೀಪ ಬರುವ ಸಾರಾಯಿಪಾಳ್ಯದ ಸಾದಿಕ್ ನಗರದಲ್ಲಿ ದಾದಿಯರು ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ ಗುಂಪೊಂದು ದಾಳಿ ನಡೆಸಿದ ಎನ್ನಲಾದ ಘಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ ಹೆಗಡೆ ನಗರದ ಕೃಷ್ಣ ವೇಣಿ ಅವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ಸಾಂತ್ವಾನ ಹೇಳಿದರು.ಡಿಸಿಪಿ ಜತೆ ಮಾತನಾಡಿದ ಅಶ್ವತ್ಥ ನಾರಾಯಣ್, ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಹಾಗೂ ದೂರು ಸ್ವೀಕರಿಸದ ಪೊಲೀಸರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದರು. ಬಳಿಕ ಮಾತನಾಡಿದ ಅವರು, ಯಾರೇ ಹಲ್ಲೆ ಮಾಡಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು. ಇಲ್ಲಿ ಜಾತಿ ಧರ್ಮ ಮುಖ್ಯವಲ್ಲ. ಅಗತ್ಯ ಭದ್ರತೆ ನೀಡುತ್ತೇವೆ. ಹೆದರುವುದು ಬೇಡ ಎಂದು ಅಭಯ ನೀಡಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 