ರಾಜ್ಯ ಪುರಸ್ಕಾರ ಪರೀಕ್ಷಾ ಶಿಬಿರ ಉದ್ಘಾಟಿಸಿ ಡಿಡಿಪಿಐ ವೆಂಕಟೇಶ್
DDPI Venkatesh inaugurates state award examination camp
ವಿಜಯನಗರ(ಹೊಸಪೇಟೆ)03: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಸ್ವಯಂಶಿಸ್ತು ಮೈಗೂಡಿಸುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಹಾಗೂ ಭಾರತ್ ಸ್ಕೌಟ್ಸ್-ಗೈಡ್ ಜಿಲ್ಲಾ ಮುಖ್ಯ ಆಯುಕ್ತ ವೆಂಕಟೇಶ್ ರಾಮಚಂದ್ರ್ಪ ಹೇಳಿದರು.
ನಗರದ ಸುರಭಿ ವಿದ್ಯಾನಿಕೇತನ ಶಾಲೆ-ಕಾಲೇಜು ಹೊಸೂರಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಹಾಗೂ ಜಿಲ್ಲಾ ಸಂಸ್ಥೆ ವಿಜಯನಗರ ಹಾಗೂ ಸುರಭಿ ವಿದ್ಯಾನಿಕೇತನ ಶಾಲೆ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ರಾಜ್ಯ ಪುರಸ್ಕಾರ ಪರೀಕ್ಷೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದ ಅತ್ಯುನ್ನತ ಪರೀಕ್ಷೆಯಾದ ರಾಜ್ಯ ಪುರಸ್ಕಾರ ಪರೀಕ್ಷೆಯನ್ನು ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬ ನಾಣ್ನುಡಿಯಂತೆ, ಮಕ್ಕಳು ದೇಶಕ್ಕೆ ಕೊಡುಗೆ ನೀಡುವ ಉತ್ತಮ ಪ್ರಜೆಗಳಾಗಬೇಕು. ಬಾಲ್ಯದಿಂದಲೇ ಮಕ್ಕಳಿಗೆ ಸ್ಕೌಟ್-ಗೈಡ್ ಸಂಸ್ಥೆಯು ಚಟುವಟಿಕೆ, ಶಿಬಿರಗಳ ಮೂಲಕ ಸರ್ವಾಂಗೀಣ ಬದುಕು ಕಟ್ಟಿಕೊಳ್ಳುವುದನ್ನು ಕಲಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಶೇಖರ್ಪ ಹೊರಪೇಟೆ ಮಾತನಾಡಿ, ಮಕ್ಕಳು ಪಠ್ಯ ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಲಿಷ್ಠರಾಗಲು ಸಾಧ್ಯವಾಗುತ್ತದೆ. ಸ್ಕೌಟ್ಸ್-ಗೈಡ್ಸ್ ಕೆಲವು ಸಾಹಸಮಯ ಚಟುವಟಿಕೆಗಳು, ಶಿಬಿರಗಳು ಮಕ್ಕಳನ್ನು ಧೈರ್ಯವಂತರನ್ನಾಗಿಸುತ್ತದೆ.
ಈ ವೇಳೆ ಶಾಲೆಯ ಆಡಳಿತಾಧಿಕಾರಿ ಶ್ರೀಧರ್, ಸಂಸ್ಥೆಯ ಉಪಾಧ್ಯಕ್ಷೆ ಕಮಲಾ ದೀಕ್ಷಿತ್, ಸ್ಕೌಟ್ಸ್ನ ಜಿಲ್ಲಾ ಆಯುಕ್ತರು ಎಲ್.ಬಸವರಾಜ್, ಗೈಡ್ನ ಜಿಲ್ಲಾ ಆಯುಕ್ತರು ಪಿ.ಸುನಂದ, ಜಿಲ್ಲಾ ಕಾರ್ಯದರ್ಶಿ ಕೆ.ರಾಜಶೇಖರ, ಜಿಲ್ಲಾ ಜಂಟಿ ಕಾರ್ಯದರ್ಶಿ ಅಕ್ಕಮಹಾದೇವಿ, ಶಿಬಿರದ ನಾಯಕರಾದ ನಾಗರಾಜ್, ಅಕ್ಕಮಹಾದೇವಿ, ಜಿಲ್ಲಾ ತರಬೇತಿ ಆಯುಕ್ತೆ ಎ.ರೇಣುಕಾ, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ತಿಪ್ಪೇಸ್ವಾಮಿ, ನಟರಾಜ್, ಜಿಲ್ಲಾ ಸಂಘಟಕ ಪಾಟೀಲ್ ಜಿಬಿಸಿ, ಶರೀಪ್ ಹತ್ತಿಮತ್ತೂರ ಇತರರು ಭಾಗವಹಿಸಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 