ದ.ಕ. ಜಿಲ್ಲಾಧಿಕಾರಿ ಸಿಂಧು ರೂಪೇಶ್ ಅಧಿಕಾರ ಸ್ವೀಕಾರ
ಮಂಗಳೂರು, ಸೆ 7 ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅವರು ಶನಿವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ರೂಪಾ ನೂತನ ಜಿಲ್ಲಾಧಿಕಾರಿಯವರನ್ನು ಸ್ವಾಗತಿಸಿದರು. ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್, ತಹಶೀಲ್ದಾರ್ ಗುರುಪ್ರಸಾದ್ ಉಪಸ್ಥಿತರಿದ್ದರು. ಸಿಂಧು ಅವರು ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಮಹಿಳಾ ಜಿಲ್ಲಾಧಿಕಾರಿ. ಈ ಹಿಂದೆ, 1989 ರಲ್ಲಿ ರಂಜನಿ ಶ್ರೀಕುಮಾರ್ ಅವರು ಅವಿಭಜಿತ ದ.ಕ. ಜಿಲ್ಲೆಯ ಪ್ರಥಮ ಮಹಿಳಾ ಜಿಲ್ಲಾಧಿಕಾರಿಯಾಗಿದ್ದರು. ಸಿಂದು ಬಿ. ರೂಪೇಶ್ ಅವರು ದ.ಕ. ಜಿಲ್ಲೆಯ 129 ನೇ ಜಿಲ್ಲಾಧಿಕಾರಿ. ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳೆರಡೂ ಹುದ್ದೆಗಳಲ್ಲಿ ಮಹಿಳೆಯರಿರುವುದು ವಿಶೇಷ. ಹಾಲಿ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ನಿನ್ನೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ, ಇಂತಹ ಸಂದರ್ಭದಲ್ಲಿ ತಾವು ಅಧಿಕಾರಿಯಾಗಿ ಮುಂದುವರಿಯುವುದು ಸರಿಯಲ್ಲ ಎಂದು ಹೇಳಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದರು. ರಾಜೀನಾಮೆಯ ಬೆನ್ನಲ್ಲೇ ಸಿಂಧು ರೂಪೇಶ್ ಅವರನ್ನು ಜಿಲ್ಲಾಧಿಕಾರಿಯಾಗಿ ಸರ್ಕಾರ ನೇಮಿಸಲಾಗಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 