ಕಾಂಗ್ರೆಸ್ಗೆ ಡಿಎಂಕೆಯಿಂದ 32 ಸೀಟುಗಳ ಆಫರ್
DMK offers 32 seats to Congress
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಡಳಿತಾರೂಢ ಡಿಎಂಕೆ ನೇತೃತ್ವದ ಮೈತ್ರಿಕೂಟದಲ್ಲಿ ಬಿರುಕು ಮೂಡುವ ಲಕ್ಷಣಗಳು ಕಾಣುತ್ತಿವೆ. ಡಿಎಂಕೆ ನೀಡುತ್ತಿರುವ 32 ಸೀಟುಗಳ ಆಫರ್ನಿಂದ ಅಸಮಾಧಾನಗೊಂಡಿರುವ ತಮಿಳುನಾಡು ಕಾಂಗ್ರೆಸ್ ನಾಯಕರು, ನಟ ವಿಜಯ್ ಅವರ 'ತಮಿಳಗ ವೆಟ್ರಿ ಕಳಗಂ' (TVK) ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ರಾಹುಲ್ ಗಾಂಧಿ ಅವರ ಮುಂದೆ ಪ್ರಸ್ತಾಪ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕನಿಷ್ಠ 40 ಸೀಟುಗಳ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್, ಈಗ 38 ಸೀಟುಗಳಿಗೆ ಪಟ್ಟು ಹಿಡಿದಿದೆ.ಆದರೆ ಕಾಂಗ್ರೆಸ್ಗೆ ಕೇವಲ 32 ಸೀಟುಗಳನ್ನು ನೀಡಲು ಡಿಎಂಕೆ ಸಿದ್ಧವಿದೆ ಎನ್ನಲಾಗಿದೆ. ಕೇವಲ ಮೈತ್ರಿಯಷ್ಟೇ ಅಲ್ಲದೆ, ಚುನಾವಣೆ ಗೆದ್ದ ನಂತರ ಸರ್ಕಾರದಲ್ಲಿ 'ಅಧಿಕಾರ ಹಂಚಿಕೆ' (ಸಚಿವ ಸ್ಥಾನ) ಬೇಕು ಎಂಬುದು ಕಾಂಗ್ರೆಸ್ ಸಂಸದ ಮಾಣಿಕ್ಕಂ ಟ್ಯಾಗೋರ್ ಅವರ ಪ್ರಬಲ ಬೇಡಿಕೆಯಾಗಿದೆ.
ಇದೇ ವೇಳೆ, ನಟ ವಿಜಯ್ ಅವರ ಟಿವಿಕೆ ಪಕ್ಷವು ಕಾಂಗ್ರೆಸ್ ಅನ್ನು "ನೈಸರ್ಗಿಕ ಮಿತ್ರ" ಎಂದು ಕರೆದಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. "ರಾಹುಲ್ ಗಾಂಧಿ ಮತ್ತು ವಿಜಯ್ ಉತ್ತಮ ಸ್ನೇಹಿತರು. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ," ಎಂದು ಟಿವಿಕೆ ವಕ್ತಾರ ಫೆಲಿಕ್ಸ್ ಜೆರಾಲ್ಡ್ ಹೇಳಿದ್ದಾರೆ.
ಟಿವಿಕೆ ನಾಯಕ ನಿರ್ಮಲ್ ಕುಮಾರ್ ಪ್ರತಿಕ್ರಿಯಿಸಿ, "ಮೈತ್ರಿ ಬಗ್ಗೆ ಪಕ್ಷದ ಮುಖ್ಯಸ್ಥ ವಿಜಯ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಚುನಾವಣೆಗೆ ಇನ್ನೂ ಎರಡು ತಿಂಗಳು ಬಾಕಿ ಇರುವುದರಿಂದ ಸಮಾಲೋಚನೆಗಳು ನಡೆಯುತ್ತಿವೆ ಎಂದಿದ್ದಾರೆ.
ಡಿಎಂಕೆ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ವಿಜಯ್ ಅವರ ಟಿವಿಕೆ ಕಾರ್ಡ್ ಬಳಸುತ್ತಿದೆಯೇ ಅಥವಾ ನಿಜವಾಗಿಯೂ ಮೈತ್ರಿ ಬದಲಾಗಲಿದೆಯೇ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.
ಮತ್ತೊಂದು ಕಡೆ ತಮಿಳುನಾಡಿನಲ್ಲಿ ಮೊದಲ ಬಾರಿ ಅಧಿಕಾರ ಹಿಡಿಯಲು ಸಕಲ ಪ್ರಯತ್ನ ನಡೆಸುತ್ತಿರುವ ಬಿಜೆಪಿಯು ಪ್ರಾದೇಶಿಕ ಪಕ್ಷಗಳತ್ತ ಹೆಚ್ಚು ಗಮನ ಕೇಂದ್ರೀಕರಿಸಿದ್ದು, ನಟ ವಿಜಯ್ ಅವರ ಟಿವಿಕೆ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ ಎಂದು ವರದಿಗಳು ತಿಳಿಸಿವೆ.ಒಟ್ಟಾರೆಯಾಗಿ,ನಟ ವಿಜಯ್ ಅವರ ಟಿವಿಕೆ ಪಕ್ಷವು ಯಾರ ಬಳಿ ಮೈತ್ರಿ ಮಾಡುತ್ತೆ ಎಂಬುದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 