ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಬೇಡ, ಟರ್ಕಿಗೆ ಖಡಕ್ ಎಚ್ಚರಿಕೆ
ನವದೆಹಲಿ, ಫೆಬ್ರವರಿ 15,ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಅವರು ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಪ್ರಸ್ತಾಪ ಮಾಡಿರುವ ಎಲ್ಲ ಅಂಶಗಳನ್ನು ಭಾರತ ತಿರಸ್ಕರಿಸಿದೆ, ದೇಶದ ಆಂತರಿಕ ವ್ಯವಹಾರಗಳಲ್ಲಿ ಮುಂದೆ ಎಂದೂ ಹಸ್ತಕ್ಷೇಪ ಮಾಡದಂತೆ ಖಡಕ್ ಎಚ್ಚರಿಕೆ ಸಂದೇಶ ರವಾನೆ ನೀಡಿದೆ. ಟರ್ಕಿಶ್ ಅಧ್ಯಕ್ಷರು ಮತ್ತು ಟರ್ಕಿ-ಪಾಕಿಸ್ತಾನ ಜಂಟಿ ಘೋಷಣೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಉಲ್ಲೇಖಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು ಜಮ್ಮು ಮತ್ತು ಕಾಶ್ಮೀರದ ಎಲ್ಲ ಉಲ್ಲೇಖಗಳನ್ನು ಭಾರತ ತಿರಸ್ಕರಿಸಿದೆ ಎಂದರು.
ಇದು ಭಾರತದ ಅವಿಭಾಜ್ಯ ಮತ್ತು ಪಾಕಿಸ್ತಾನದಿಂದ ಭಾರತ ಮತ್ತು ಪ್ರದೇಶಕ್ಕೆ ಹೊರಹೊಮ್ಮುತ್ತಿರುವ ಭಯೋತ್ಪಾದನೆಯಿಂದ ಉಂಟಾಗುವ ಗಂಭೀರ ಬೆದರಿಕೆ ಸೇರಿದಂತೆ ಭಾರತದ ಆಂತರಿಕ ವ್ಯವಹಾರಗಳಲ್ಲಿ ಎಂದಿಗೂ ಹಸ್ತಕ್ಷೇಪ ಮಾಡದಂತೆ ಮತ್ತು ಸತ್ಯದ ಬಗ್ಗೆ ಸರಿಯಾದ ತಿಳುವಳಿಕೆ ಬೆಳೆಸಿಕೊಂಡು ಪ್ರತಿಕ್ರಿಯೆ ನೀಡುವಂತೆ ಟರ್ಕಿಶ್ ನಾಯಕರಿಗೆ ಖಡಕ್ ಸೂಚನೆ ನೀಡಿದೆ. ಕಾಶ್ಮೀರ ವಿಷಯದಲ್ಲಿ ಪಾಕಿಸ್ತಾನದ ನಿಲುವನ್ನು ಅಂಕಾರಾ ಬೆಂಬಲಿಸಲಿದೆ ಎಂದು ಟರ್ಕಿ ಅಧ್ಯಕ್ಷ ಎರ್ಡೊಗನ್ ಪಾಕಿಸ್ತಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 