ಒಳ ಮೀಸಲಾತಿಗೆ ಡಿಎಸ್ಎಸ್ ಒತ್ತಾಯ: ಶಂಕರ ಬಣಕಾರ
DSS insists on internal reservation: Shankar Banakara
ಯಲಬುರ್ಗಾ24 : ಪರಿಶಿಷ್ಟ ಜಾತಿಗಳಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಸಮುದಾಯಗಳಿಗೆ ಒಳ ಮೀಸಲಾತಿಕಲ್ಪಿಸುವ ನ್ಯಾಯಮೂರ್ತಿಎ.ಜೆ. ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಶೀಘ್ರ ಅನುಷ್ಠಾನಗೊಳಸಬೇಕು ಎಂದುದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ಧ್ವನಿ ಚಂದ್ರಕಾಂತ ಎಸ ಕದ್ರೂಳ್ಳಿ ಬಣ ಯಲಬುರ್ಗಾ ತಾಲೂಕು ಯುವ ಘಟಕ ಅಧ್ಯಕ್ಷ ಶಂಕರ ಬಣಕಾರ ಒತ್ತಾಯಿಸಿದರು.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ‘ಒಳ ಮೀಸಲಾತಿಕುರಿತು ಸುಪ್ರೀಂಕೋರ್ಟ್ ಇತ್ತೀಚೆಗೆ ನೀಡಿರುವ ತೀರ್ಪು, ಮಾದಿಗ ಸಮುದಾಯದ ವಿವಿಧ ಸಂಘಟನೆಗಳು ನಡೆಸಿಕೊಂಡು ಬಂದಿರುವ ಹೋರಾಟಕ್ಕೆ ಸಿಕ್ಕ ಜಯವಾಗಿದೆ’ಮಾದಿಗ ಸಮಾಜವು ಶೈಕ್ಷಣಿಕ, ಆರ್ಥಿಕ, ರಾಜಕೀಯ, ಸಾಮಾಜಿಕವಾಗಿ ಹಿಂದುಳಿದ್ದು, ಒಳಮೀಸಲಾತಿಗಾಗಿ ಮೂರು ದಶಕಗಳಿಂದ ಹೋರಾಟ ಮಾಡುತ್ತಿದೆ.ಪರಿಶಿಷ್ಟ ಜಾತಿ ಮೀಸಲಾತಿಯಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರರಾಜ್ಯ ಸರ್ಕಾರಗಳಿಗೆ ಇದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದರೂ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ದೂರಿದರು. ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವಲ್ಲಿ ನಿರ್ಲಕ್ಷ್ಯ ತೋರಿದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 