ದೇಶದಲ್ಲಿ ಆಹಾರ ಧಾನ್ಯಗಳ ಅಗತ್ಯ ಸಂಗ್ರಹ- ಎಫ್ಸಿಐ ನಿರ್ದೇಶಕ ಡಿ ವಿ ಪ್ರಸಾದ್
ಬೆಂಗಳೂರು, ಏಪ್ರಿಲ್ 12,ದೇಶದಲ್ಲಿ 301.73 ಲಕ್ಷ ಟನ್ ಅಕ್ಕಿ ಮತ್ತು 236.46 ಲಕ್ಷ ಟನ್ ಗೋಧಿ ಸೇರಿದಂತೆ 538.19 ಲಕ್ಷ ಟನ್ ಆಹಾರ ಧಾನ್ಯಗಳ ಸಂಗ್ರಹವಿದೆ ಎಂದು ಭಾರತದ ಆಹಾರ ನಿಗಮ (ಎಫ್ಸಿಐ) ವ್ಯವಸ್ಥಾಪಕ ನಿರ್ದೇಶಕ ಡಿ ವಿ ಪ್ರಸಾದ್ ತಿಳಿಸಿದ್ದಾರೆ.ಲಾಕ್ಡೌನ್ ಘೋಷಣೆಯಾದಾಗಿನಿಂದ ಎಫ್ಸಿಐ 87 ರೈಲು ಲೋಡ್ಗಳ ಮೂಲಕ ಸುಮಾರು 2.44 ಲಕ್ಷ ಟನ್ ಆಹಾರ ಧಾನ್ಯಗಳನ್ನು ಕರ್ನಾಟಕಕ್ಕೆ ಪೂರೈಕೆ ಮಾಡಿದೆ.ಇದರಿಂದಾಗಿ ಸುಮಾರು ನಾಲ್ಕು ಕೋಟಿ ಫಲಾನುಭವಿಗಳಿಗೆ ಆಹಾರ ಧಾನ್ಯಗಳನ್ನು ಪೂರೈಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಿದೆ ಎಂದು ಅವರು ಹೇಳಿದರು.ಲಾಕ್ಡೌನ್ ಅವಧಿಯಲ್ಲಿ ರಾಜ್ಯಕ್ಕೆ ಒಟ್ಟು 2.76 ಲಕ್ಷ ಟನ್ ಅಕ್ಕಿ ಮತ್ತು 43 ಸಾವಿರ ಟನ್ ಗೋಧಿ ಬಿಡುಗಡೆ ಮಾಡಲಾಗಿದೆ.ಬೇಯಿಸಿದ ಆಹಾರವನ್ನು ಪೂರೈಸುತ್ತಿರುವ ದತ್ತಿ ಸಂಸ್ಥೆಗಳಿಗೆ ಮತ್ತು ಎನ್ಜಿಒಗಳಿಗೆ ಸಬ್ಸಿಡಿ ದರದಲ್ಲಿ ಪ್ರತಿ ಕೆಜಿ ಅಕ್ಕಿಗೆ 22ರೂ. ದರದಲ್ಲಿ ಮತ್ತು ಪ್ರತಿ ಕೆಜಿ ಗೋಧಿಗೆ 21ರೂ ದರದಲ್ಲಿ ಆಹಾರ ಧಾನ್ಯ ಪೂರೈಸಲು ಹೊಸ ಫಲಾನುಭವಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಪ್ರಸಾದ್ ಹೇಳಿದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 