ಕಿಶೋರಗೆ ಕಠಿಣ ಶಿಕ್ಷೆ ವಿಧಿಸಿ, ದೇಶದಿಂದ ಗಡಿಪಾರು ಮಾಡಿ: ದಲಿತ ಸಂಘಟನೆ ಒತ್ತಾಯ
Dalit organization demands strict punishment and deportation of Kishora from the country
ಕಿಶೋರಗೆ ಕಠಿಣ ಶಿಕ್ಷೆ ವಿಧಿಸಿ, ದೇಶದಿಂದ ಗಡಿಪಾರು ಮಾಡಿ: ದಲಿತ ಸಂಘಟನೆ ಒತ್ತಾಯ
ಶಿಗ್ಗಾವಿ 23: ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರತ್ತ ಶೂ ಎಸೆಯಲು ಪ್ರಯತ್ನಿಸಿದ ವಕೀಲ ರಾಕೇಶ ಕಿಶೋರಗೆ ಕಠಿಣ ಶಿಕ್ಷೆ ವಿಧಿಸಿ, ದೇಶದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ಸಂಘಟನೆ, ಮಾನವ ಬಂಧುತ್ವ ವೇದಿಕೆ, ದಲಿತ ಸಂಘರ್ಷ ಸಮಿತಿ, ಸಮತಾ ಸೈನಿಕ ದಳ, ಜೀವಿಕ ಜೀತದಾಳು ಸಮಿತಿ ವತಿಯಿಂದ ಪಟ್ಟಣದ ಡಾ. ಅಂಬೇಡ್ಕರ್ ಆಡಳಿತ ಸಂಕೀರ್ಣದ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.
ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಶೂ ಎಸೆದು, ನ್ಯಾಯ ನಿಂದನೆ ಮಾಡಿದಂತಹ ಪ್ರಕರಣ ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಕೃತ್ಯಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ತಹಸೀಲ್ದಾರ್ ಮೂಲಕ ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ತಹಸೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅಶೋಕ ಕಾಳೆ, ಫಕೀರ್ಪ ಕುಂದೂರ, ಕರೆಪ್ಪ ಕಟ್ಟಿಮನಿ, ಸುರೇಶ ಹರಿಜನ, ಸಂತೋಷ ಕಟ್ಟಿಮನಿ, ಪ್ರಕಾಶ ಹರಿಜನ, ಶಂಕ್ರ್ಪ ಹರಿಜನ, ಎಲ್ಲಪ್ಪ ಹರಿಜನ, ಬಸವರಾಜ ಕಡೇಮನಿ, ಯಲ್ಲಪ್ಪ ಮುಂದಿನಮನಿ, ಎಚ್.ಐ. ಬೆಳಗಲಿ ಇತರರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 