ಕಿಶೋರಗೆ ಕಠಿಣ ಶಿಕ್ಷೆ ವಿಧಿಸಿ, ದೇಶದಿಂದ ಗಡಿಪಾರು ಮಾಡಿ: ದಲಿತ ಸಂಘಟನೆ ಒತ್ತಾಯ
Dalit organization demands strict punishment and deportation of Kishora from the country
ಕಿಶೋರಗೆ ಕಠಿಣ ಶಿಕ್ಷೆ ವಿಧಿಸಿ, ದೇಶದಿಂದ ಗಡಿಪಾರು ಮಾಡಿ: ದಲಿತ ಸಂಘಟನೆ ಒತ್ತಾಯ
ಶಿಗ್ಗಾವಿ 23: ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರತ್ತ ಶೂ ಎಸೆಯಲು ಪ್ರಯತ್ನಿಸಿದ ವಕೀಲ ರಾಕೇಶ ಕಿಶೋರಗೆ ಕಠಿಣ ಶಿಕ್ಷೆ ವಿಧಿಸಿ, ದೇಶದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ಸಂಘಟನೆ, ಮಾನವ ಬಂಧುತ್ವ ವೇದಿಕೆ, ದಲಿತ ಸಂಘರ್ಷ ಸಮಿತಿ, ಸಮತಾ ಸೈನಿಕ ದಳ, ಜೀವಿಕ ಜೀತದಾಳು ಸಮಿತಿ ವತಿಯಿಂದ ಪಟ್ಟಣದ ಡಾ. ಅಂಬೇಡ್ಕರ್ ಆಡಳಿತ ಸಂಕೀರ್ಣದ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.
ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಶೂ ಎಸೆದು, ನ್ಯಾಯ ನಿಂದನೆ ಮಾಡಿದಂತಹ ಪ್ರಕರಣ ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಕೃತ್ಯಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ತಹಸೀಲ್ದಾರ್ ಮೂಲಕ ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ತಹಸೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅಶೋಕ ಕಾಳೆ, ಫಕೀರ್ಪ ಕುಂದೂರ, ಕರೆಪ್ಪ ಕಟ್ಟಿಮನಿ, ಸುರೇಶ ಹರಿಜನ, ಸಂತೋಷ ಕಟ್ಟಿಮನಿ, ಪ್ರಕಾಶ ಹರಿಜನ, ಶಂಕ್ರ್ಪ ಹರಿಜನ, ಎಲ್ಲಪ್ಪ ಹರಿಜನ, ಬಸವರಾಜ ಕಡೇಮನಿ, ಯಲ್ಲಪ್ಪ ಮುಂದಿನಮನಿ, ಎಚ್.ಐ. ಬೆಳಗಲಿ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 