ದಲಿತರಿಗೆ ಮುಖ್ಯಮಂತ್ರಿ ಪಟ್ಟ ದೊರೆಯಲಿದೆ: ರಾಜು ಗೌಡ
ಯಾದಗಿರಿ, ಜ 12 : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅವಧಿ ಮುಗಿದ ನಂತರ ರಾಜ್ಯದಲ್ಲಿ ದಲಿತರಿಗೆ ಮುಖ್ಯಮಂತ್ರಿ ಪಟ್ಟ ದೊರೆಯಲಿದೆ ಎಂದು ಬಿಜೆಪಿ ಶಾಸಕ ರಾಜುಗೌಡ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತರು ಮುಖ್ಯಮಂತ್ರಿ ಆಗಬೇಕಾದರೆ ಅದು ಬಿಜೆಪಿಯಿಂದಲೇ ಸಾಧ್ಯ. ಬೇರೆ ಪಕ್ಷದಲ್ಲಿ ಆಗಲು ಸಾಧ್ಯವಿಲ್ಲ. ನಾವೆಲ್ಲರೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರಿನಲ್ಲಿ ಶಾಸಕರಾಗಿದ್ದೇವೆ ಎಂದರು.
ಯಡಿಯೂರಪ್ಪನವರ ಅವಧಿ ಮುಗಿದ ಬಳಿಕ ಬಿಜೆಪಿ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ದಲಿತರಿಗೆ ಸಿಎಂ ಸ್ಥಾನ ಸಿಗುತ್ತದೆ. ಬಿಜೆಪಿಯಿಂದಲೇ ದಲಿತರಿಗೆ ಒಳ್ಳೆಯ ಸ್ಥಾನಮಾನ ಸಿಗಲು ಸಾಧ್ಯ ಎಂದರು.
ಕಾಂಗ್ರೆಸ್, ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ದಲಿತರ ಅಭಿವೃದ್ಧಿಯ ಬಗ್ಗೆ ಕಾಳಜಿ ವಹಿಸಲಿಲ್ಲ. ಅಲ್ಲದೇ, ಪಕ್ಷ ಸಂಪೂರ್ಣ ಬಹುಮತದಿಂದ ಅಧಿಕಾರದ ಚುಕ್ಕಾಣಿ ಹಿಡಿದಿದ್ದರೂ, ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಿಲಿಲ್ಲ ಎಂದು ಅವರು ಆರೋಪಿಸಿದರು.
ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಆದರೆ, ಅವರಿಗೂ ಮುಖ್ಯಮಂತ್ರಿ ಸ್ಥಾನ ನೀಡಿಲಿಲ್ಲ ಎಂದರು.
ಮೈತ್ರಿ ಸರ್ಕಾರದಲ್ಲಿ ಜಿ.ಪರಮೇಶ್ವರಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿತ್ತು. ಆದರೆ, 2013 ರಲ್ಲಿಯೇ ಪರಮೇಶ್ವರ್ ಅವರಿಗೆ ಕಾಂಗ್ರೆಸ್ ಮುಖ್ಯಮಂತ್ರಿ ಮಾಡಲಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ರಾಜು ಗೌಡ ಟಾಂಗ್ ನೀಡಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 