ಕೀರು ಸೇತುವೆಗೆ ಹಾನಿ: ಸಂಚಾರಕ್ಕೆ ತೋಂದರೆ
ಲೋಕದರ್ಶನ ವರದಿ
ಬೈಲಹೊಂಗಲ 04: ತಾಲೂಕಿನ ಸಂಪಗಾಂವ- ಭಾಂವಿಹಾಳ ಮಧ್ಯೆ ರಸ್ತೆ (ಜರಿಹಳ್ಳ) ಇತ್ತಿಚೆಗೆ ಸುರಿದ ಭಾರಿ ಮಳೆಗೆ ಕಿರು ಸೇತುವೆ ಕೊಚ್ಚಿ ಹೋಗಿದ್ದು ಸಾರಿಗೆ ಸಂಚಾರವಿಲ್ಲದೇ ಸುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳಿಗೆ, ವ್ಯಾಪಾರಸ್ಥರಿಗೆ, ಗ್ರಾಮಸ್ಥರಿಗೆ ತೀವೃ ತೊಂದರೆಯಾಗಿದೆ.
ಇತ್ತಿಚೆಗೆ ಸುರಿದ ಮಳೆಯ ಆವಾಂತರಕ್ಕೆ ಕಿರು ಸೇತುವೆ ಒಂದು ಬದಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದು ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಸಂಭಂದಪಟ್ಟ ಅಧಿಕಾರಿಗಳು ತಿಂಗಳು ಕಳೆದರೂ ಕಿರು ಸೇತುವೆ ದುರಸ್ತಿ ಕಾರ್ಯ ಕೈಗೊಂಡಿಲ್ಲ. ತಕ್ಷಣ ಅಧಿಕಾರಿಗಳು ಕೆಲಸ ಪ್ರಾರಂಭಿಸಬೇಕು ಇಲ್ಲವಾದಲ್ಲಿ ಭಾಂವಿಹಾಳ, ಯರಗೋಪ್ಪ, ಯರಗುದ್ದಿ, ಹಣ್ಣಿಕೇರಿ, ಜಕ್ಕನಾಯ್ಕನಕೊಪ್ಪ ಗ್ರಾಮಸ್ಥರು ಸೇರಿ ಉಗ್ರ ಪ್ರತಿಭಟನೆ ಮಾಡುವುದಾಗಿ ಕರ್ನಾಟಕ ನವ ನಿರ್ಮಾಪಡೆಯ ಮಂಜುನಾಥ ಉಳವಿ, ಅಜ್ಮಿರ ನದಾಫ, ಚನ್ನಪ್ಪ ಕಳ್ಳಸನ್ನವರ, ಈರಣ್ಣ ಬಡಿಗೇರ ಎಚ್ಚರಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 