ನೃತ್ಯ ದೈವಿಕವಾದ ಪುರಾತನಗಂಧರ್ವ ವಿದ್ಯೆ: ಕವಿತಾ ರಾಠೋಡ
Dance is a divine ancient art: Kavita Rathod
ಶಿಗ್ಗಾವಿ 31 : ನೃತ್ಯವು ಒಂದು ದೈವಿಕವಾದ ಪುರಾತನ ಗಂಧರ್ವ ವಿದ್ಯೆ ಈ ವಿದ್ಯೆಯನ್ನು ಮಕ್ಕಳಿಗೆ ತರಬೇತಿ ನೀಡುವಲ್ಲಿ ಈ ನೃತ್ಯ ಶಾಲೆ ಹಾಗೂ ಕಾಮನಹಳ್ಳಿ ಕುಟುಂಬದ ಸೇವೆ ಶ್ಲಾಘನೀಯ ಎಂದು ಸಮಾಜ ಸೇವಕಿ ಕವಿತಾ ರಾಠೋಡ ಹೇಳಿದರು.
ಪಟ್ಟಣದ ಜಯನಗರದ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಶ್ರೀ ನಟರಾಜ ನಾಟ್ಯಕಲಾ ಸಂಸ್ಥೆ ವತಿಯಿಂದ ಅಖಿಲ ಭಾರತ ಗಂಧರ್ವ ಮಹಾ ವಿದ್ಯಾಲಯ ನಡೆಸುವ ಭರತನಾಟ್ಯ ಪರೀಕ್ಷೆಯ ಅಂಕಪಟ್ಟಿ ವಿತರಿಸಿ ಮಾತನಾಡಿದ ಅವರು ಮಕ್ಕಳು ಈ ನೃತ್ಯ ಕಲಿಕೆಯಲ್ಲಿ ಆಳವಾದ ಅಧ್ಯಯನ ಮಾಡಲು ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಳ್ಳ ಬೇಕು ಪೋಷಕರು ಮಕ್ಕಳ ಕಲಿಕೆಗೆ ಆದ್ಯತೆ ನೀಡಬೇಕು ಎಂದರು.
ನೃತ್ಯ ಗುರು ಸಾಯಿಬಾಬಾ ಕಾಮನಹಳ್ಳಿ ಅವರು ಗಂಧರ್ವ ಮಹಾ ವಿದ್ಯಾಲಯ ಮತ್ತು ಡಾ ಗಂಗೂಬಾಯಿ ಹಾನಗಲ್ ವಿಶ್ವ ವಿದ್ಯಾಲಯ ನಡೆಸುವ ನೃತ್ಯ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿ ಅದರ ಸದುಪಯೋಗ ಪಡೆಯಲು ತಿಳಿಸಿದರು.ಅಧ್ಯಕ್ಷತೆಶಾಲಿನಿ ಕಾಮನಹಳ್ಳಿ ವಹಿಸಿದ್ದರು. ಕು ಜಾಹ್ನವಿ ಎಸ್ ಕೆ ಸ್ವಾಗತಿಸಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 