ನೃತ್ಯ ದೈವಿಕವಾದ ಪುರಾತನಗಂಧರ್ವ ವಿದ್ಯೆ: ಕವಿತಾ ರಾಠೋಡ
Dance is a divine ancient art: Kavita Rathod
ಶಿಗ್ಗಾವಿ 31 : ನೃತ್ಯವು ಒಂದು ದೈವಿಕವಾದ ಪುರಾತನ ಗಂಧರ್ವ ವಿದ್ಯೆ ಈ ವಿದ್ಯೆಯನ್ನು ಮಕ್ಕಳಿಗೆ ತರಬೇತಿ ನೀಡುವಲ್ಲಿ ಈ ನೃತ್ಯ ಶಾಲೆ ಹಾಗೂ ಕಾಮನಹಳ್ಳಿ ಕುಟುಂಬದ ಸೇವೆ ಶ್ಲಾಘನೀಯ ಎಂದು ಸಮಾಜ ಸೇವಕಿ ಕವಿತಾ ರಾಠೋಡ ಹೇಳಿದರು.
ಪಟ್ಟಣದ ಜಯನಗರದ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಶ್ರೀ ನಟರಾಜ ನಾಟ್ಯಕಲಾ ಸಂಸ್ಥೆ ವತಿಯಿಂದ ಅಖಿಲ ಭಾರತ ಗಂಧರ್ವ ಮಹಾ ವಿದ್ಯಾಲಯ ನಡೆಸುವ ಭರತನಾಟ್ಯ ಪರೀಕ್ಷೆಯ ಅಂಕಪಟ್ಟಿ ವಿತರಿಸಿ ಮಾತನಾಡಿದ ಅವರು ಮಕ್ಕಳು ಈ ನೃತ್ಯ ಕಲಿಕೆಯಲ್ಲಿ ಆಳವಾದ ಅಧ್ಯಯನ ಮಾಡಲು ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಳ್ಳ ಬೇಕು ಪೋಷಕರು ಮಕ್ಕಳ ಕಲಿಕೆಗೆ ಆದ್ಯತೆ ನೀಡಬೇಕು ಎಂದರು.
ನೃತ್ಯ ಗುರು ಸಾಯಿಬಾಬಾ ಕಾಮನಹಳ್ಳಿ ಅವರು ಗಂಧರ್ವ ಮಹಾ ವಿದ್ಯಾಲಯ ಮತ್ತು ಡಾ ಗಂಗೂಬಾಯಿ ಹಾನಗಲ್ ವಿಶ್ವ ವಿದ್ಯಾಲಯ ನಡೆಸುವ ನೃತ್ಯ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿ ಅದರ ಸದುಪಯೋಗ ಪಡೆಯಲು ತಿಳಿಸಿದರು.ಅಧ್ಯಕ್ಷತೆಶಾಲಿನಿ ಕಾಮನಹಳ್ಳಿ ವಹಿಸಿದ್ದರು. ಕು ಜಾಹ್ನವಿ ಎಸ್ ಕೆ ಸ್ವಾಗತಿಸಿ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 