ದಿಂಡಿ ಉತ್ಸವ ಕಾರ್ಯಕ್ರಮ
ರಾಣೇಬೆನ್ನೂರ20: ವಿಠ್ಠಲ ರುಕುಮಾಯಿ ದಿಂಡಿ ಉತ್ಸವ, ಭಾವಸಾರ ಕ್ಷತ್ರಿಯ ದೈವ ಮಂಡಳಿ ಮತ್ತು ಯುವಕ ಮಂಡಳಿ ಹಾಗೂ ಭಜನಾ ಮಂಡಳಿ ಇವರ ಆಶ್ರಯದಲ್ಲಿ 40ನೇ ವರ್ಷದ ದಿಂಡಿ ಉತ್ಸವ ಕಾರ್ಯಕ್ರಮವು ಜು.22 ರಿಂದ ಜು.24 ರವರೆಗೆ 3 ದಿನಗಳ ಕಾಲ ಕೋಟೆ ರೋಡ್ನಲ್ಲಿರುವ ಯಮನೂರು ಗಲ್ಲಿಯ ವಿಠ್ಠಲ ಮಂದಿರದಲ್ಲಿ ನಡೆಯಲಿದೆ.
ಜು.22 ರಂದು ರಾತ್ರಿ.8.30ಕ್ಕೆ (ಗ್ರಂಥ) ಪೋತಿ ಸ್ಥಾಪನೆ ಮತ್ತು ಭಜನಾ ಕಾರ್ಯಕ್ರಮಗಳು ಜರುಗಲಿವೆ. ಜು.23 ರಂದು ಏಕಾದಶಿ, ಜು.24 ರಂದು ಬೆ.8 ಗಂಟೆಗೆ ವಿಠ್ಠಲ ರುಕುಮಾಯಿ ಮೂತರ್ಿಯ ಪಾಲಕಿ ಉತ್ಸವ ಹಾಗೂ ನಗರ ಪ್ರದಕ್ಷಣೆ ನಂತರ ಮಧ್ಯಾಹ್ನ.2ಗಂಟೆಗೆ ಅನ್ನಸಂತರ್ಪಣೆ ನಡೆಯುವುದು.
ಹೊಳಲಿನ ದೊಂಡಿಬಾ ಟಿಕಾರೆ ಮತ್ತು ಹುಬ್ಬಳ್ಳಿಯ ವೆಂಕಟೇಶರಾವ್ ಸರ್ವದೆ, ದಾವಣಗೇರಿಯ ವಿಶ್ವನಾಥ ಜಿಂಗಾಡೆ, ತಿಪ್ಪೇಶ ಗಣಾಚಾರಿ, ಶ್ರೀಕಾಂತ ಜಿ.ಪಿ, ಸವಣೂರಿನ ನಾಮದೇವ ರಾಶಿಂಕರ ಸಂಗಡಿಗರಿಂದ ಕೀರ್ತನೆ ಮತ್ತು ಪ್ರವಚನ ನಡೆಯುವುದು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಭಾವಸಾರ ಕ್ಷತ್ರಿಯ ಸಮಾಜವು ಪ್ರಕಟಣೆಯಲ್ಲಿ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 