ದಿಂಡಿ ಉತ್ಸವ ಕಾರ್ಯಕ್ರಮ
ರಾಣೇಬೆನ್ನೂರ20: ವಿಠ್ಠಲ ರುಕುಮಾಯಿ ದಿಂಡಿ ಉತ್ಸವ, ಭಾವಸಾರ ಕ್ಷತ್ರಿಯ ದೈವ ಮಂಡಳಿ ಮತ್ತು ಯುವಕ ಮಂಡಳಿ ಹಾಗೂ ಭಜನಾ ಮಂಡಳಿ ಇವರ ಆಶ್ರಯದಲ್ಲಿ 40ನೇ ವರ್ಷದ ದಿಂಡಿ ಉತ್ಸವ ಕಾರ್ಯಕ್ರಮವು ಜು.22 ರಿಂದ ಜು.24 ರವರೆಗೆ 3 ದಿನಗಳ ಕಾಲ ಕೋಟೆ ರೋಡ್ನಲ್ಲಿರುವ ಯಮನೂರು ಗಲ್ಲಿಯ ವಿಠ್ಠಲ ಮಂದಿರದಲ್ಲಿ ನಡೆಯಲಿದೆ.
ಜು.22 ರಂದು ರಾತ್ರಿ.8.30ಕ್ಕೆ (ಗ್ರಂಥ) ಪೋತಿ ಸ್ಥಾಪನೆ ಮತ್ತು ಭಜನಾ ಕಾರ್ಯಕ್ರಮಗಳು ಜರುಗಲಿವೆ. ಜು.23 ರಂದು ಏಕಾದಶಿ, ಜು.24 ರಂದು ಬೆ.8 ಗಂಟೆಗೆ ವಿಠ್ಠಲ ರುಕುಮಾಯಿ ಮೂತರ್ಿಯ ಪಾಲಕಿ ಉತ್ಸವ ಹಾಗೂ ನಗರ ಪ್ರದಕ್ಷಣೆ ನಂತರ ಮಧ್ಯಾಹ್ನ.2ಗಂಟೆಗೆ ಅನ್ನಸಂತರ್ಪಣೆ ನಡೆಯುವುದು.
ಹೊಳಲಿನ ದೊಂಡಿಬಾ ಟಿಕಾರೆ ಮತ್ತು ಹುಬ್ಬಳ್ಳಿಯ ವೆಂಕಟೇಶರಾವ್ ಸರ್ವದೆ, ದಾವಣಗೇರಿಯ ವಿಶ್ವನಾಥ ಜಿಂಗಾಡೆ, ತಿಪ್ಪೇಶ ಗಣಾಚಾರಿ, ಶ್ರೀಕಾಂತ ಜಿ.ಪಿ, ಸವಣೂರಿನ ನಾಮದೇವ ರಾಶಿಂಕರ ಸಂಗಡಿಗರಿಂದ ಕೀರ್ತನೆ ಮತ್ತು ಪ್ರವಚನ ನಡೆಯುವುದು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಭಾವಸಾರ ಕ್ಷತ್ರಿಯ ಸಮಾಜವು ಪ್ರಕಟಣೆಯಲ್ಲಿ ತಿಳಿಸಿದೆ.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 