ಹನುಮ ಜಯಂತಿಗೆ ಶುಭಾಶಯ ಕೋರಿದ ದರ್ಶನ್
ಬೆಂಗಳೂರು, ಏ.8,ಕೊರೊನಾ ಸೋಂಕು ನಿಯಂತ್ರಿಸಲು ದೇಶವ್ಯಾಪಿ ಲಾಕ್ ಡೌನ್ ಆದೇಶ ಜಾರಿಯಾದ ಹಿನ್ನೆಲೆಯಲ್ಲಿ ಜಾತ್ರೆ, ಜಯಂತಿ ಮೇಲೂ ಅದರ ಕರಾಳ ಛಾಯೆ ಆವರಿಸಿದೆ. ಬುಧವಾರ ಹನುಮ ಜಯಂತಿ ಪ್ರಯುಕ್ತ ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಟ್ವಿಟರ್ ಖಾತೆಯಲ್ಲಿ ಹನುಮ ಜಯಂತಿಯ ಶುಭಾಷಯಗಳನ್ನು ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಮಸ್ತ ನಾಡಿನ ಜನತೆಗೆ ಹನುಮ ಜಯಂತಿಯ ಶುಭಾಷಯಗಳು. ರಾಮನ ಪರಮಭಕ್ತ ಹನುಮ, ಧೈರ್ಯ ಮತ್ತು ಶಕ್ತಿಯ ಪ್ರತೀಕವಾದ ಈ ಸ್ವಾಮಿಯ ಆಶೀರ್ವಾದ ಎಲ್ಲರ ಮೇಲೂ ಇರಲಿ ಎಂದಿದ್ದಾರೆ.ಇನ್ನು, ಜನರಿಗೆ ಕೊರೊನಾ ಜಾಗೃತಿಯ ಬಗ್ಗೆ ಸಂದೇಶ ನೀಡಿರುವ ಅವರು, ಮನೆಯಲ್ಲೇ ಇರಿ, ಹುಷಾರಾಗಿರಿ ಎಂದು ಮನವಿ ಮಾಡಿದ್ದಾರೆ.ಇನ್ನು, ಹನುಮನ ಭಕ್ತರು ಮನೆಯಲ್ಲೇ ಇದ್ದುಕೊಂಡು ಮನದಲ್ಲಿ ಹನುಮರ ಸ್ಮರಣೆ ಮಾಡುವ ಮೂಲಕವೇ ತಮ್ಮ ದೈವವನ್ನು ಸ್ಮರಿಸುತ್ತಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 