ಪಿಎಂ ಕೇರ್ಸ್ ನಿಧಿಗೆ ೧೦೦ ಕೋಟಿ, ಕರ್ನಾಟಕಕ್ಕೆ ೫ ಕೋಟಿ ನೆರವು ಪ್ರಕಟಿಸಿದ ಡಿಮಾರ್ಟ್
ನವದೆಹಲಿ, ಏ ೫, ರಕ್ಕಸ ಕೊರೊನಾ ವೈರಸ್ ವಿರುದ್ದ ದೇಶದಲ್ಲಿ ಸಾರಲಾಗಿರುವ ಸಮರಕ್ಕೆ ಉದ್ಯಮಿಗಳು, ಸೆಲೆಬ್ರಿಟಿಗಳು ಹಾಗೂ ಕ್ರೀಡಾಪಟುಗಳು ಸ್ವಯಂಪ್ರೇರಿತವಾಗಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಭಾರಿ ಪ್ರಮಾಣದ ಹಣದ ನೆರವು ಪ್ರಕಟಿಸುತ್ತಿವೆ. ಈ ಕ್ರಮವಾಗಿ ಅವೆನ್ಯೂ ಸೂಪರ್ಮಾರ್ಟ್ಸ್ ರಿಟೈಲ್ ಬ್ರಾಂಡ್ ಡಿಮಾರ್ಟ್ ೧೫೫ ಕೋಟಿ ಹಣಕಾಸು ನೆರವು ಪ್ರಕಟಿಸಿದೆ.ಪ್ರಧಾನ ಮಂತ್ರಿ ಕೇರ್ಸ್ ನಿಧಿಗೆ ೧೦೦ ಕೋಟಿ ರೂ ದೇಣಿಗೆ ನೀಡುವುದಾಗಿ ಪ್ರಕಟಿಸಿದೆ. ಕೊರೊನಾ ಬಾಧಿತ ರಾಜ್ಯಗಳಿಗೆ ೫೫ ಕೋಟಿ ರೂ. ನೀಡುವುದಾಗಿ ತಿಳಿಸಿದೆ.
ಈ ಕುರಿತು ಡಿಮಾರ್ಟ್ ಪ್ರವರ್ತಕ ರಾಧಾಕೃಷ್ಣನ್ ಡಮಾನಿ ಮಾತನಾಡಿ, ಭಾರತ ಸೇರಿದಂತೆ ಪ್ರಪಂಚದ ಎಲ್ಲ ದೇಶಗಳು ಹಿಂದೆಂದೂ ಕಂಡಿರದ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿವೆ ಜನರನ್ನು ರಕ್ಷಿಸಲು ಕೇಂದ್ರ, ರಾಜ್ಯ ಸರ್ಕಾರಗಳು ಕೈಗೊಂಡಿರುವ ಎಲ್ಲ ಕ್ರಮಗಳಿಗೆ ನಮ್ಮ ಪೂರ್ಣ ಬೆಂಬಲವಿದೆ. ದೇಶದ ಜನರನ್ನು ರಕ್ಷಿಸಲು ಪ್ರತಿಯೊಬ್ಬರೂ ತಮ್ಮ ಕೈಲಾಗುವ ಪ್ರಯತ್ನ ನಡೆಸಬೇಕು ಎಂದು ಕರೆ ನೀಡಿದ್ದಾರೆ. ಡಿಮಾರ್ಟ್ ಪಿ ಎಂ ಕೇರ್ಸ್ ೧೦೦ ಕೋಟಿ ಪ್ರಕಟಿಸಿದೆ.. ಮಹಾರಾಷ್ಟ್ರ, ಗುಜರಾತ್ ಗೆ ತಲಾ ೧೦ ಕೋಟಿ, ಆಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕ, ರಾಜಸ್ಥಾನ, ಪಂಜಾಬ್ ರಾಜ್ಯಗಳಿಗೆ ತಲಾ ೫ ಕೋಟಿ, ತಮಿಳುನಾಡು, ಚತ್ತೀಸಗಡ, ಉತ್ತರ ಪ್ರದೇಶ ಹಾಗೂ ಮಧ್ಯ ಪ್ರದೇಶಗಳಿಗೆ ತಲಾ ೨.೫ ಕೋಟಿ ರೂಪಾಯಿ ಹಣಕಾಸು ನೆರವು ಪ್ರಕಟಿಸಿದೆ.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 