ಗೋ ರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ: ಕ್ರಮಕ್ಕೆ ಆಗ್ರಹ
Deadly attack on cow protectors: call for action
ಬೀಳಗಿ 02: ಗೋ ರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಕ್ರಮ ಜರುಗಿಸಬೇಕು ಎಂದು ಶ್ರೀರಾಮ ಸೇನೆ ಜಿಲ್ಲಾ ಘಟಕದಿಂದ ಮಂಗಳವಾರ ಪ್ರತಿಭಟನೆ ನಡೆಸಿ ಗ್ರೇಡ್-2 ತಹಶೀಲ್ದಾರ ಆನಂದ ಕೋಲ್ಹಾರ ರವರಿಗೆ ಮನವಿ ಸಲ್ಲಿಸಲಾಯಿತು
ಗೋ ರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದವರನ್ನು ಬಂಧಿಸಿ ಕ್ರಮ ಜರುಗಿಸಬೇಕು ಎಂದು ಶ್ರೀರಾಮ ಸೇನೆ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಶಾಮ ಶಿಂಧೆ ಒತ್ತಾಯಿಸಿದರು.
ಬೆಳಗಾವಿ ಜಿಲ್ಲಾ ಹುಕ್ಕೇರಿ ತಾಲೂಕು ಇಂಗಳಗಿ ಗ್ರಾಮದಲ್ಲಿ ಜೂನ್ 27ರಂದು ಗೋ ರಕ್ಷಣೆಗೆ ಹೋದ 4 ಗೋ ಭಕ್ತರನ್ನು ಗ್ರಾಮದ ಕೆಲ ಗುಂಡಾಗಳು ರಾಕ್ಷಸರಂತೆ ವರ್ತಿಸಿ ತೆಂಗಿನಮರಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಹೊಡೆದು ಕೊಲೆ ಮಾಡಲು ಪ್ರಯತ್ನಿಸಿದ ಘಟನೆ ಖಂಡಿಸಿ ಗೃಹ ಸಚಿವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಇಂತಹ ಅಮಾನವೀಯ ಘಟನೆ ನಡೆದಿದ್ದು ಅತ್ಯಂತ ನಾಚಿಕೆಗೇಡು. ನಾಗರಿಕ ಸಮಾಜ ತಲೆ ತಗ್ಗಿಸುವಂತ ಹೇಯ ಕೃತ್ಯವಾಗಿದೆ ಎಂದು ದೂರಿದರು.
ಶ್ರೀರಾಮ ಸೇನೆಯ ಜಿಲ್ಲಾ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಅಜ್ಜನವರು, ತಾಲೂಕು ಅಧ್ಯಕ್ಷ ಶಿವನಗೌಡ ಕಾನಗೌಡರ, ಪ್ರಧಾನ ಕಾರ್ಯದರ್ಶಿ ಬಸವರಾಜ ಚಿಮ್ಮಡ, ಸೋಮಯ್ಯ ಹಿರೇಮಠ, ಸುನಿಲ ಬಾಳಶೆಟ್ಟಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 