ಜಿರಗಾಳ ಅವರಿಗೆ ಆತ್ಮೀಯ ಬೀಳ್ಕೊಡುಗೆ
ಬಾಗಲಕೋಟೆ೦೭: ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಗ್ರಂಥಾಲಯದ ಸಹಾಯಕರಾಗಿ 25 ವರ್ಷಗಳ ಕಾರ್ಯನಿರ್ವಹಿಸಿ ವಯೋನಿವೃತ್ತಿ ಹೊಂದಿದ ವಿ.ಬಿ.ಜಿರಗಾಳ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.
ವಯೋನಿವೃತ್ತಿ ಹೊಂದಿದ ವಿ.ಬಿ.ಜಿರಗಾಳ ದಂಪತಿಗಳಿಗೆ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಲಾಯಿತು. ನಂತರ ಗ್ರಂಥಾಲಯದ ಸಿಬ್ಬಂದಿಗಳಾದ ಸುನಿಲ್ ಮುದಗಲ್ಲ, ಆರ್.ಎನ್.ವಾಲಿಕಾರ ಮಾತನಾಡಿ ಸರಕಾರಿ ಸೇವೆಯಲ್ಲಿ ನಿವೃತ್ತಿ ಸಹಜವೆಂದರು. ಜಗತ್ತಿನಲ್ಲಿರುವ ಎಲ್ಲ ಜೀವರಾಶಿಗಳ ನೋವು-ನಲಿವಿನ ಜೊತೆಗೆ ನಾನು ಕೂಡ ಒಬ್ಬರಾಗಿ ಇರುಬೇಕು. ಏಕಾಂಗಿಯಾಗಿ ಇರದೇ ಹಸುವಿನಂತಹ ಮನಸ್ಸಿನಿಂದ ಎಲ್ಲರ ಜೊತೆ ಸಹ ಬಾಳ್ವೆಯಿಂದ ಬದುಕಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮುಖ್ಯ ಗ್ರಂಥಾಲಯ ಅಧಿಕಾರಿ ಎಂ.ಎಸ್.ರಬ್ಬಿನಾಳ ಮಾತನಾಡಿ ಪ್ರತಿಯೊಬ್ಬರು ಪ್ರಮಾಣಿಕ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. 25 ವರ್ಷ ನಿರಂತರ ಸೇವೆಯಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದೇ ಕಾರ್ಯನಿರ್ವಹಿಸಿ ವಯೋನಿವೃತ್ತಿ ಹೊಂದಿದ ಜಿರಗಾಳ ಅವರ ಕಾರ್ಯವನ್ನು ಶ್ಲಾಘಿಸಿದರು. ಅವರ ನಿವೃತ್ತಿ ಜೀವನ ಸುಖವಾಗಿರಲೆಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಎಂ.ನಾಡಗೌಡ, ಎಂ.ಎನ್.ತಳವಾರ, ಎ.ಎಸ್.ಆಲಗೂರ, ಮುತ್ತಪ್ಪ ಜಂಗಮ ಶೆಟ್ಟಿ, ಮುತ್ತಪ್ಪ ಬಿಂಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸುನೀಲ ಮುದಗಲ್ ನಿರೂಪಿಸಿದರು. ಎ,ಜಿ ಕಬ್ಬಿನ ಸ್ವಾಗತಿಸಿ, ಅಸೋದಿ ವಂದಿಸಿದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 