*ಮೂವರು ಸಮುದ್ರ ಪಾಲು; ಓರ್ವನ ಶವ ಪತ್ತೆ - ಇನ್ನಿಬ್ಬರಿಗೆ ಹುಡುಕಾಟ
Sea
ಮೂವರು ಸಮುದ್ರ ಪಾಲು; ಓರ್ವನ ಶವ ಪತ್ತೆ - ಇನ್ನಿಬ್ಬರಿಗೆ ಹುಡುಕಾಟ
ಕಾರವಾರ, ಜ. 21 : ಸಮುದ್ರದಲ್ಲಿ ಈಜಲು ತೆರಳಿದ ಓರ್ವನನ್ನು ರಕ್ಷಿಸಲು ಧಾವಿಸಿದ ನಾಲ್ವರ ಪೈಕಿ ಇಬ್ಬರೂ ಕಡಲ ಅಲೆಯ ಪಾಲಾಗಿದ್ದು ಈರ್ವರನ್ನು ಮೀನುಗಾರರು ರಕ್ಷಿಸಿದ ಘಟನೆ ಗೋಕರ್ಣದಲ್ಲಿ ನಡೆದಿದೆ.
ಬೆಂಗಳೂರು ಪ್ರವಾಸಿಗ ತಿಪ್ಪೇಶನನ್ನು ಸಮುದ್ರದಲ್ಲಿ ರಕ್ಷಿಸಲು ಹೋದ ಯುವತಿ ಸುಮಾ, ಯುವಕ ರವಿ ಸಮುದ್ರಪಾಲಾಗಿದ್ದಾರೆ .
ಬೆಂಗಳೂರಿನಿಂದ ಇಂದು 16 ಜನ ದೇವರ ದರ್ಶನ ಪಡೆಯಲು ಗೋಕರ್ಣಕ್ಕೆ ಆಗಮಿಸಿದ್ದರು. ಊಟ ಮಾಡಿ ದೇವರ ದರ್ಶನ ಪಡೆದ ನಂತರ ಯುವಕ ತಿಪ್ಪೇಶ್ ಸಮುದ್ರಕ್ಕಿಳಿದಿದ್ದ.ಅಲೆಯ ಅಬ್ಬರ ಆತನನ್ನು ನೀರಿನ ಒಳಕ್ಕೆ ಸೆಳೆಯಿತು. ಇದನ್ನು ಗಮನಿಸಿದ ಸುಮಾ ಎಂಬ ಯುವತಿ ಆತನ ರಕ್ಷಣೆಗಾಗಿ ದಾವಿಸಿದಳು. ಆಕೆಯನ್ನು ಅಲೆಯು ಸೆಳೆಯಿತು. ಇದನ್ನು ಗಮನಿಸಿದ ರವಿ ಹಾಗೂ ರತ್ನಮ್ಮ ,ಪವಿತ್ರ ಸುಮಳನ್ನು ರಕ್ಷಿಸಲು ಮುಂದಾದರು. ದುರಾದೃಷ್ಟವಶಾತ್ ಸುಮಾ , ರವಿ ಕೂಡ ಸಮುದ್ರದ ಅಲೆಗೆ ಸಿಲುಕಿದರು. ಈ ವೇಳೆಗೆ ಧಾವಿಸಿದ ಸ್ಥಳೀಯರು ಪವಿತ್ರ ಹಾಗೂ ರತ್ನಮ್ಮ ಎಂಬುವವರನ್ನು ರಕ್ಷಿಸಿದರು. ಸ್ಥಳೀಯ ಮೀನುಗಾರರು ರಕ್ಷಣೆಗೆ ಸಹಾಯ ಮಾಡಿದ್ದಾರೆ.ಘಟನೆ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಿಪ್ಪೇಶ ಶವ ದೊರೆತಿದೆ. ಸುಮಾ, ರವಿ ಅವರಿಗೆ ಹುಡುಕಾಟ ನಡೆದಿದೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 