ವೇದ ವಿದ್ವಾಂಸ ಸುಧಾಕರ ಚತುರ್ವೇದಿ ನಿಧನ
ಬೆಂಗಳೂರು, ಫೆ 27 :ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ವಿದ್ವಾಂಸ, ಶತಾಯುಷಿ ಸುಧಾಕರ ಚತುರ್ವೇದಿ ನಗರದಲ್ಲಿಂದು ನಿಧನರಾದರು. ಅವರಿಗೆ 127 ವರ್ಷ ವಯಸ್ಸಾಗಿತ್ತು.
ನಾಲ್ಕು ವೇದಗಳಿಗೂ ಭಾಷ್ಯ ಬರೆದು, ಚತುರ್ವೇದಿಗಳೆನಿಸಿದ್ದ ಇವರು ಸಾವಿರಾರು ಕ್ವಿಟ್ ಇಂಡಿಯಾ ಚಳುವಳಿಯ ಹುತಾತ್ಮ ಭಾರತೀಯರ ಅಂತ್ಯ ಸಂಸ್ಕಾರ ನಡೆಸಿದ್ದರು.
ತುಮಕೂರಿನ ಕ್ಯಾತಸಂದ್ರದಲ್ಲಿ ಜನಿಸಿದ ಚತುರ್ವೇದಿಯವರು ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಪ್ರತ್ಯಕ್ಷದರ್ಶಿಯಾಗಿದ್ದರು. ನಂತರ ಮಹಾತ್ಮ ಗಾಂಧೀಜಿಯವರ ಒಡನಾಟದಲ್ಲಿದ್ದು , ಸ್ವಾತಂತ್ರ ಹೋರಾಟದಲ್ಲಿ ಸಕ್ರಿಯರಾಗಿ ಪಾಲ್ಗೊಂಡಿದ್ದರು.
ಇದರ ಜೊತೆಗೆ ವೇದಗಳ ಅಧ್ಯಯನದಲ್ಲಿ ತಮ್ಮನ್ನು ತೊಡಗಿಸಿಕೊಂಡು, ವೇದ ಪ್ರಚಾರಕ್ಕಾಗಿ 50ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.
ವೇದ ವಿದ್ವಾಂಸ ಸುಧಾಕರ ಚತುರ್ವೇದಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲೆಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 