ಹುಟ್ಟುಹಬ್ಬದಂದು ಮಾದಕ ವಸ್ತು ಸೇವಿಸಿ ಇಬ್ಬರ ಸಾವು: ಮೆಡಿಕಲ್ ಸ್ಟೋರ್ ಮಾಲೀಕ ಬಂಧನ
ಬೆಂಗಳೂರು, ನ.22 : ಹುಟ್ಟು ಹಬ್ಬದ ಸಂದರ್ಭದಲ್ಲಿ ಮಾದಕ ವಸ್ತುಗಳ ಜೊತೆಗೆ ಮತ್ತು ಬರುವ ಮಾತ್ರೆ ಸೇವಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆಗೆ ಸಂಬಂಧಿಸಿ, ಮಾತ್ರೆ ನೀಡಿದ ಮೆಡಿಕಲ್ ಸ್ಟೋರ್ ಮಾಲೀಕನನ್ನು ವೈಯಾಲಿಕಾವಲ್ ಪೊಲೀಸರು ಬಂಧಿಸಿದ್ದಾರೆ.
ರಾಜಾಜಿನಗರದ ಮನ್ದೀಪ್ ಫಾಮರ್ಾ ಮೆಡಿಕಲ್ ಸ್ಟೋರ್ನ ಮಾಲೀಕ ಮನೀಷ್ ಕುಮಾರ್ (36) ಬಂಧಿತ ಆರೋಪಿ. ರಾಜಾಜಿನಗರದ 4ನೇ ಬ್ಲಾಕ್ನ ವಾಸಿಯಾಗಿದ್ದ ಮನೀಷ್ ಕುಮಾರ್, ಮೋದಿ ಆಸ್ಪತ್ರೆಯ ಸಿಗ್ನಲ್ ಬಳಿ ಮನ್ದೀಪ್ ಫಾಮರ್ಾ ಎಂಬ ಔಷಧಿ ಅಂಗಡಿ ನಡೆಸುತ್ತಿದ್ದ. ಕಾನೂನುಬಾಹಿರವಾಗಿ ಟೈಡಾಲ್ ಮಾತ್ರೆಗಳನ್ನು ಖರೀದಿಸಿ ಮಾರಾಟ ಮಾಡಿರುವುದು ತನಿಖೆಯ ವೇಳೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟೈಡಾಲ್ ಮಾತ್ರೆಯನ್ನು ಪುಡಿಮಾಡಿಕೊಂಡು ಸಿರಂಜ್ಗೆ ಡಿಸ್ಟಲ್ ವಾಟರ್ಗೆ ಸೇರಿಸಿ ಸಿರಂಜ್ಗೆ ತುಂಬಿಸಿಕೊಂಡು ನಶೆ ಬರಲು ಚುಚ್ಚಿಕೊಂಡಿದ್ದ ಕೋದಂಡರಾಮಪುರದ ಅಭಿಲಾಷ್ ಹಾಗೂ ಗೋಪಿ ಮೃತಪಟ್ಟಿದ್ದರು.
ತೀವ್ರ ಅಸ್ವಸ್ಥನಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಹಾನ್ ಎಂಬಾತ ವಿಚಾರಣೆಯ ವೇಳೆ ಪೊಲೀಸರಿಗೆ ಮಾತ್ರೆ ಖರೀದಿಸಿರುವ ಬಗ್ಗೆ ಮಾಹಿತಿ ನೀಡಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 