ಸಮುದ್ರದಲ್ಲಿ ಮುಳುಗಿ ಪ್ರವಾಸಿಗ ಸಾವು
ಕಾರವಾರ, ಸೆ 22 ಬೆಂಗಳೂರಿನಿಂದ ಪ್ರವಾಸಕ್ಕೆಂದು ತೆರಳಿದ್ದ ಪ್ರವಾಸಿಗನೋರ್ವ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹೊನ್ನಾವರ ಬಳಿಯ ಮುಡರ್ೆಶ್ವರದಲ್ಲಿ ಭಾನುವಾರ ನಡೆದಿದೆ.
ನಟರಾಜ್ ಮೃತಪಟ್ಟ ದುದರ್ೆವಿ. ಒಟ್ಟು 11 ಮಂದಿಯ ತಂಡ ಬೆಂಗಳೂರಿನಿಂದ ಪ್ರವಾಸಕ್ಕೆಂದು ತೆರಳಿತ್ತು. ಇಂದು ಮುಂಜಾನೆ ಮುಡರ್ೆಶ್ವರದಲ್ಲಿ ನಟರಾಜ್ ಸೇರಿ ಒಟ್ಟು ಐವರು ಸಮುದ್ರಕ್ಕೆ ಇಳಿದಿದ್ದರು. ನೀರಿನಲ್ಲಿ ಸಿಲುಕಿದ್ದ ಅವರಲ್ಲಿ ನಾಲ್ವರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದರು.
ಆದರೆ, ನಟರಾಜ್ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಈ ಐವರು ನೀರಿಗೆ ಇಳಿಯುವ ಮೊದಲು, ಸ್ಥಳದಲ್ಲಿದ್ದ ಮೀನುಗಾರರು ನೀರಿನ ಆಳಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದರು. ಆದರೂ ಅದ್ಯಾವುದನ್ನು ಲೆಕ್ಕಿಸದೇ ಇವರು ಆಳವಾದ ನೀರಿಗೆ ಇಳಿದಿದ್ದರು ಎನ್ನಲಾಗಿದೆ. ನಟರಾಜ್ ಶವವನ್ನು ಮೀನುಗಾರರೇ ದಡಕ್ಕೆ ತಂದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮುಡರ್ೆಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 