ರಾಜ್ಯದಲ್ಲಿ ಕರೋನವೈರಸ್ ನಿಂದ ಸಾವನ್ನಪ್ಪಿದವರ ಸಂಖ್ಯೆ 4 ಕ್ಕೆ ಏರಿಕೆ
ಬಾಗಲಕೋಟೆ, ಏಪ್ರಿಲ್ 4, ಕಳೆದ ರಾತ್ರಿ ಇಲ್ಲಿನ 75 ವರ್ಷದ ವ್ಯಕ್ತಿಯೊಬ್ಬರು ಕೊರೊನವೈರಸ್ನಿಂದ ಸಾವನ್ನಪ್ಪುವುದರೊಂದಿಗೆ ರಾಜ್ಯದಲ್ಲಿ ಮಾರಕ ಸೋಂಕಿಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿದೆ.ಕಳೆದ ವಾರ ಸೋಂಕು ದೃಢಪಟ್ಟಿದ್ದ ವ್ಯಕ್ತಿಯನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ಗೆ ದಾಖಲಿಸಲಾಗಿತ್ತು. ಆದರೆ ಅವರು ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕೃತ ಮೂಲಗಳು ಯುಎನ್ಐಗೆ ತಿಳಿಸಿವೆ.ನತದೃಷ್ಟ ವ್ಯಕ್ತಿ ಪಟ್ಟಣದಲ್ಲಿ ಅಡುಗೆ ಎಣ್ಣೆ ಮತ್ತು ದಿನಸಿ ಮಾರುವ ಸಣ್ಣ ಅಂಗಡಿಯೊಂದನ್ನು ಹೊಂದಿದ್ದರು. ಆದರೆ, ವ್ಯಕ್ತಿ ಹೊರಗೆ ಪ್ರಯಾಣ ಬೆಳೆಸಿದ ಇತಿಹಾಸವನ್ನು ಹೊಂದಿರಲಿಲ್ಲ. ಆದರೆ,ಅವರ ಮಗ ಮತ್ತು ಮಗಳು ಇತ್ತೀಚೆಗೆ ಬೆಂಗಳೂರಿನಿಂದ ಅವರನ್ನು ನೋಡಲು ಬಂದಿದ್ದರು ಎಂದು ಹೇಳಲಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 