ಸಾಲ ಮನ್ನಾ ಪ್ರಶ್ನಿಸಿ ಕಾಂಗ್ರೆಸ್ನಿಂದ ದೀದಿ ದೂರ?
ಹೊಸದಿಲ್ಲಿ 26: ಈಚಿನ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯಗಳಿಸಿರುವ ರಾಜಸ್ಥಾನ, ಮಧ್ಯ ಪ್ರದೇಶ ಮತ್ತು ಛತ್ತೀಸ್ಗಢ ರಾಜ್ಯ ಸರಕಾರಗಳು ಅಧಿಕಾರಕ್ಕೆ ಬಂದ ತತ್ಕ್ಷಣವೇ ರೈತರ ಸಾಲ ಮನ್ನಾ ಪ್ರಕಟಿಸಿರುವುದನ್ನು ಪರೋಕ್ಷವಾಗಿ ಟೀಕಿಸಿರುವ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನಜರ್ಿ "ಈ ರೀತಿಯ ಸಾಲ ಮನ್ನಾ ಕ್ರಮಗಳು ವಿವೇಚನಾಯುಕ್ತವಾಗಿವೆಯೇ; ಅವು ಆಥರ್ಿಕವಾಗಿ ಸಾಧುವೇ?' ಎಂದು ಪ್ರಶ್ನಿಸುವ ಮೂಲಕ ಕಾಂಗ್ರೆಸ್ ಪಕ್ಷದಿಂದ ಅಂತರ ಕಾಯ್ದುಕೊಳ್ಳುವ ಸುಳಿವು ನೀಡಿದ್ದಾರೆ.
'ಹಲವಾರು ರಾಜ್ಯಗಳು ರೈತರ ಸಾಲ ಮನ್ನಾ ಮಾಡುತ್ತಿವೆ. ಇವು ನಿಜಕ್ಕೂ ಎಷ್ಟು ಸರಿ ? ಇದರಿಂದ ರಾಜ್ಯದ ಆಥರ್ಿಕ ಸ್ಥಿತಿಗತಿಗೆ ಧಕ್ಕೆ ಉಂಟಾಗುವುದಿಲ್ಲವೇ ? ಎಂದು ಪ್ರಶ್ನಿಸಿರುವ ಮಮತಾ, ಬಿಜೆಪಿ ಸರಕಾರದ ಕೃಷಿ ವಿಮಾ ಯೋಜನೆಯನ್ನು ಕೂಡ ಟೀಕಿಸಿದ್ದಾರೆ. ಈ ರೀತಿಯ ಯೋಜನೆಗಳು ಕಾರ್ಯಸಾಧುವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
'ನಾನೀಗ ರೈತರ ಸಾಲ ಮನ್ನಾ ಕುರಿತ ಅಂಕಿ ಅಂಶ, ದಾಖಲೆ ಪತ್ರಗಳನ್ನು ತರಿಸಿಕೊಂಡು ಅವಲೋಕಿಸುತ್ತಿದ್ದೇನೆ; ಕೃಷಿ ಸಾಲ ಮನ್ನಾ ಅನ್ನೋದು ಎಷ್ಟು ಸರಿ ಎಂಬ ಬಗ್ಗೆ ವಿಶ್ಲೇಷಣೆ ನಡೆಸುತ್ತಿದ್ದೇನೆ' ಎಂದು ಮಮತಾ ಹೇಳಿದ್ದಾರೆ.
ಪಂಚ ರಾಜ್ಯಗಳ ಚುನಾವಣೆಯಲ್ಲಿ ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ವಿಜಯ ಸಾಧಿಸಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ನೇರವಾಗಿ ಅಭಿನಂದಿಸದಿದ್ದ ಮಮತಾ, ಆ ರಾಜ್ಯಗಳ ಜನತೆಯನ್ನು ಅಭಿನಂದಿಸಿದ್ದರು ಎನ್ನುವುದು ಗಮನಾರ್ಹವಾಗಿದೆ. ಆದರೆ ಆಕೆ ತೆಲಂಗಾಣದಲ್ಲಿ ಪ್ರಚಂಡ ವಿಜಯ ಸಾಧಿಸಿದ್ದ ಕೆಸಿಆರ್ ಅವರನ್ನು ಮತ್ತು ಅವರ ಪಕ್ಷವನ್ನು ಅಭಿನಂದಿಸಿದ್ದರು.
ಈ ನಡುವೆ ಕೆಸಿಆರ್ ಅವರ ವಿಪಕ್ಷ ರಂಗ ರಚನೆಯ ಯತ್ನವನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖೀಲೇಶ್ ಯಾದವ್ ಸ್ವಾಗತಿಸಿದ್ದು ತಾನು ಅವರನ್ನು ಸದ್ಯದಲ್ಲೇ ಭೇಟಿಯಾಗಿ ಮಾತುಕತೆ ನಡೆಸಲಿದ್ದೇನೆ ಎಂದು ಹೇಳಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 