ಸಾಲ ಬಾಧೆ: ಯುವ ರೈತ ಸಚಿನ ಪಾಟೀಲ್ ನೇಣಿಗೆ ಶರಣು

ಮಾಂಜರಿ 16: ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ಯುವ ರೈತ ಸಚಿನ ರಾಜು ಪಾಟೀಲ್(32) ಇವರು ಸಾಲ ಬಾಧೆ ತಾಳಲಾರದೆ ಮನೆಯಲ್ಲಿ ನೇಣು ಬಿಗದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಮುಂಜಾನೆ ಬೆಳಕಿಗೆ ಬಂದಿದೆ ಆತ್ಮಹತ್ಯೆ ಮಾಡಿಕೊಂಡಿರುವ ರೈತ ಗ್ರಾಮದ ವಿವಿಧ ಆರ್ಥಿಕ ಸಹಕಾರಿ ಸಂಸ್ಥೆಗಳಲ್ಲಿ ಸುಮಾರು 8 ರಿಂದ 10 ಲಕ್ಷ ರೂಪಾಯಿಯನ್ನು ಸಾಲ ಮಾಡಲಾಗಿದೆ ಎಂದು ಹೇಳಲಾಗಿದೆ. ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.