ಸಾಲ: ಅಪ್ರಾಪ್ತೆಗೆ ಮದುವೆ ಮಾಡಿದ ತಂದೆ
ನವದೆಹಲಿ:ಸಾಲ ತೀರಿಸುವ ಉದ್ದೇಶದಿಂದ 11 ವರ್ಷದ ಬಾಲಕಿಯನ್ನು 25 ವರ್ಷದ ಯುವಕನ ಜೊತೆ ತಂದೆ ಬಲವಂತವಾಗಿ ಮದುವೆ ಮಾಡಿಸಿದ ಘಟನೆ ಗ್ರೇಟರ್ ನೋಯ್ಡಾದಲ್ಲಿ 2 ತಿಂಗಳ ಹಿಂದೆ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಭಾನುವಾರ ರಾತ್ರಿ ಬಾಲಕಿಯ ತಾಯಿ ದೂರನ್ನು ದಾಖಲಿಸಿದ್ದಾರೆ. 2006ರ ಬಾಲ್ಯ ವಿವಾಹ ನಿಷೇಧ ಕಾಯ್ದೆ ಸೆಕ್ಷನ್ 9 ಮತ್ತು 10ರ ಅನ್ವಯ ಬಾಲಕಿಯ ತಂದೆ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
ದೂರಿನ ಪ್ರಕಾರ ಬಾಲಕಿಯ ತಂದೆ, ಗಂಡ ಹಾಗೂ ಮದುವೆ ದಳ್ಳಾಳಿಯನ್ನು ಬಂಧಿಸಿರುವುದಾಗಿ ಸಜರ್ಾಪುರ್ ಪೊಲೀಸ್ ಠಾಣಾಧಿಕಾರಿ ಮನೋಜ್ ಕುಮಾರ್ ಪಂತ್ ತಿಳಿಸಿದ್ದಾರೆ.
ದಳ್ಳಾಳಿ ವಿನೋದ್ ಎಂಬಾತ ದಿನಂಪ್ರತಿ ಮನೆಗೆ ಹಾಲು ತಂದು ಕೊಡುತ್ತಿದ್ದು, ಈ ವೇಳೆ ಬಾಲಕಿಯ ತಂದೆ ಬಳಿ ನಿಮ್ಮ ಹಣಕಾಸಿನ ಸಮಸ್ಯೆ ಪರಿಹಾರವಾಗಬೇಕಾದರೆ ಮದುವೆ ಮಾಡಿಸಿ ಎಂದು ಸಲಹೆ ಕೊಟ್ಟಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಾಲಕಿಯನ್ನು ಉತ್ತರಪ್ರದೇಶದ ಬುಲಂದ್ ಶಹರ್ ಜಿಲ್ಲೆಯ ಗ್ರಾಮವೊಂದರ ಕೃಷಿ ಕುಟುಂಬದ ಯುವಕನ ಜೊತೆ ಮದುವೆ ಮಾಡಿಕೊಡಲಾಗಿತ್ತು. ಏತನ್ಮಧ್ಯೆ 11 ವರ್ಷದ ಬಾಲಕಿಯ ಎದೆ ಮತ್ತು ಬಲಗೈ ಮೇಲೆ ಕೆಲವು ಗಾಯದ ಕಲೆಗಳಿರುವುದನ್ನು ತಾಯಿ ಗಮನಿಸಿದ್ದಳು. ಬಾಲಕಿಯನ್ನು ಕೋಣೆಯಲ್ಲಿ ಕೂಡಿ ಹಾಕಿ ಲೈಂಗಿಕ ಕ್ರಿಯೆಗಾಗಿ ಬಲವಂತಪಡಿಸುತ್ತಿದ್ದರು ಎಂದು ಆರೋಪಿಸಿದ್ದಾರೆ.
ಪೋಷಕರು ಬಾಲಕಿಗೆ ಕೊಟ್ಟಿದ್ದ ಫೋನ್ ಅನ್ನು ಒಡೆದು ಅದರ ಸಿಮ್ ಅನ್ನು ಕೂಡಾ ಕಿತ್ತು ಬಿಸಾಕಿರುವುದಾಗಿ ದೂರಿನಲ್ಲಿ ವಿವರಿಸಲಾಗಿದೆ.
ಆರಂಭದಲ್ಲಿ ಈ ಮದುವೆಗೆ ನಾನು ವಿರೋಧ ವ್ಯಕ್ತಪಡಿಸಿದ್ದೆ. ಆದರೆ ನನ್ನ ಮದುವೆಯಾಗುವ ಯುವಕ ಬಲವಂತ ಮಾಡಿಸಿ ಪೋಷಕರನ್ನು ಒಪ್ಪಿಸಿದ್ದ. ಕೊನೆಗೂ ಮದುವೆ ನಡೆದ ಮೇಲೆ ಕಿರುಕುಳ ಆರಂಭಿಸಿದ್ದರು.ಬಳಿಕ ಉತ್ತರಪ್ರದೇಶದ ಬುಲಂದ್ ಶಹಾರ್ ನ ಔರಂಗಬಾದ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲು ಹೋದಾಗ ನಿಮ್ಮ ಊರಿನ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಎಂದು ಸಲಹೆ ನೀಡಿದ್ದರು. ಅದರಂತೆ ಸಜರ್ಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಬಾಲಕಿ ವಿವರಿಸಿದ್ದಾಳೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 