ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ: ರಮೇಶ್ ಜಾರಕಿಹೊಳಿ
ವಿಜಯಪುರ, ಏ. 30, ಕೃಷ್ಣಾ ನದಿ ಇಡೀ ಉತ್ತರ ಕರ್ನಾಟಕದ ಜೀವನದಿಯಾಗಿದ್ದು, ಈ ನೀರಿನ ಸದ್ಭಳಕೆಗಿರುವ ಕಾನೂನು ತೊಡಕುಗಳನ್ನು ನಿವಾರಣೆ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಜಿಲ್ಲೆಯ ಆಲಮಟ್ಟಿ ಜಲಾಶಯದ ಪರಿವೀಕ್ಷಣೆ ಮಾಡಿದ ನಂತರ ಅವರು ಮಾಹಿತಿ ಕೊಟ್ಟಿದ್ದಾರೆ. ಆಲಮಟ್ಟಿ ಜಲಾಶಯವನ್ನು 519.6 ಮೀ. ನಿಂದ 524.256 ಮೀ. ವರೆಗೆ ಹಂತ ಹಂತವಾಗಿ ಏರಿಸಬೇಕೆನ್ನುವ ಪ್ರಸ್ತಾಪ ಸರ್ಕಾರದ ಮುಂದಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸರ್ಕಾರಕ್ಕೆ ಕೋರಿಕೆ ಸಲ್ಲಿಸಲು ಚಿಂತನೆ ನಡೆದಿದೆ ಎಂದು ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಜಾರಿಗೆ ಹಣಕಾಸಿನ ಕೊರತೆಯಿಲ್ಲ. ನಾನು ಉತ್ತರ ಕರ್ನಾಟಕದವನಾಗಿದ್ದು, ಈ ಭಾಗದ ಸಮಗ್ರ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ಯೋಜನೆ ಪೂರ್ಣಗೊಳಿಸಲು ಹಣಕಾಸಿನ ಕ್ರೋಢೀಕರಣಕ್ಕೂ ಚಿಂತನೆ ನಡೆದಿದೆ ಎಂದರು.
ಇದು ತಮ್ಮ ಅಧ್ಯಯನ ಪ್ರವಾಸವಾಗಿದ್ದು, ಯೋಜನೆಗಳ ಕುರಿತು ಮಾಹಿತಿ ಪಡೆಯಲು ಬಂದಿದ್ದೇನೆ. ಕೊರೋನಾ ಲಾಕ್ಡೌನ್ ನಂತರ ಮತ್ತೆ ಈ ಭಾಗಕ್ಕೆ ಬಂದು ಯುಕೆಪಿ ನೀರಾವರಿ ಯೋಜನೆಗಳಿಗೆ ಚುರುಕು ಮುಟ್ಟಿಸುತ್ತೇನೆ. ಅಭಿವೃದ್ಧಿ ಪರ ಯಾವುದೇ ಸಲಹೆಗಳಿಗೂ ಸ್ವಾಗತ. ನೀರಾವರಿ ಕ್ಷೇತ್ರದಲ್ಲಿ ಹೊಸ ಬದಲಾವಣೆ ತರುವುದೇ ನನ್ನ ಮುಂದಿರುವ ಗುರಿ ಎಂದರು. ತಿಡಗುಂದಿ ಜಲ ಸೇತುವೆ ಇನ್ನೂ ಲೋಕಾರ್ಪಣೆಯಾಗಿಲ್ಲ. ಶಾಸಕರಿಗೆ ಅವರ ಮತಕ್ಷೇತ್ರದಲ್ಲಿ ಕಾರ್ಯಕ್ರಮ ಮಾಡುವ ಹಕ್ಕಿದೆ. ಆದರೆ ತಿಡಗುಂದಿ ವಿಷಯದಲ್ಲಿ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾರೆ. ತಿಡಗುಂದಿ ಜಲ ಸೇತುವೆ ಇನ್ನೂ ಲೋಕಾರ್ಪಣೆಯಾಗಿಲ್ಲ ಎಂದರು. ತಿಡಗುಂದಿ ಕಾಲುವೆ ಲೋಕಾರ್ಪಣೆ ವಿಷಯದಲ್ಲಿ ಅಧಿಕಾರಿಗಳು ನಿಯಮವನ್ನು ಉಲ್ಲಂಘಿಸಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 