ಆರ್ಥಿಕತೆ ಕುಸಿತ : ಇಳಿದ ತಿರುಮಲ ಹುಂಡಿ ಸಂಗ್ರಹ
ತಿರುಮಲ, ಅ 9: ಭಾರತದ ಕುಸಿಯುತ್ತಿರುವ ಆರ್ಥಿಕತೆಯ ಪ್ರಭಾವ ತಿರುಮಲ ತಿರುಪತಿಯ ಶ್ರೀವಾರಿ ಹುಂಡಿಗೂ ತಟ್ಟಿದೆ. ಮಂಗಳವಾರ ಕೊನೆಗೊಂಡ ತಿರುಪತಿ ತಿಮ್ಮಪ್ಪನ ಒಂಭತ್ತು ದಿನಗಳ ಬ್ರಹ್ಮೋತ್ಸವಕ್ಕೆ ಭಕ್ತರ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚಾಗಿದ್ದರೂ ಶ್ರೀವಾರಿ ಹುಂಡಿ ಸಂಗ್ರಹ ತೀವ್ರವಾಗಿ ಇಳಿಕೆ ಕಂಡಿದೆ. ಒಂಭತ್ತು ದಿನಗಳ ಬ್ರಹ್ಮೋತ್ಸವದ ಸಂದರ್ಭದಲ್ಲಿ ಸುಮಾರು 7.074 ಲಕ್ಷ ಯಾತ್ರಿಕರು ತಿರುಮಲದ ಶ್ರೀವೇಂಕಟೇಶ್ವರನ ದರ್ಶನ ಪಡೆದಿದ್ದಾರೆ. ಕಳೆದ ವರ್ಷದ ಬ್ರಹ್ಮೋತ್ಸವದ ಸಂದರ್ಭದಲ್ಲಿ 5.9 ಲಕ್ಷ ಯಾತ್ರಿಕರು ಭೇಟಿ ನೀಡಿದ್ದರು. ಯಾತ್ರಿಕರ ಸಂಖ್ಯೆ ಹೆಚ್ಚಾಗಿದ್ದರೂ ಹುಂಡಿ ಸಂಗ್ರಹ ಕಡಿಮೆಯಾಗಿದೆ. ಕಳೆದ ವರ್ಷ ಹುಂಡಿ ಸಂಗ್ರಹ 20.52 ಕೋಟಿ ರೂ ಇದ್ದು ಈ ವರ್ಷ 20.40 ಕೋಟಿ ರೂ ಗೆ ಇಳಿಕೆಯಾಗಿದೆ. ಕಳೆದ ವರ್ಷ ಬ್ರಹ್ಮೋತ್ಸವದ ಸಂದರ್ಭದಲ್ಲಿ 2.17 ಲಕ್ಷ ಜನರು ಮುಡಿ ಕೊಟ್ಟಿದ್ದರೆ ಈ ವರ್ಷ 3.23 ಲಕ್ಷ ಭಕ್ತರು ಮುಡಿ ಅರ್ಪಿಸಿದ್ದು ಈ ಸಂಖ್ಯೆ ಶೇಕಡ 50 ರಷ್ಟು ಹೆಚ್ಚಳ ಕಂಡಿದೆ. ಈ ವರ್ಷ 34.01 ಲಕ್ಷ ಲಾಡು ಪ್ರಸಾದ ಮಾರಾಟವಾಗಿದ್ದು ಕಳೆದ ವರ್ಷ ಬ್ರಹ್ಮೋತ್ಸವದ ಸಂದರ್ಭದಲ್ಲಿ ಹತ್ತು ಲಕ್ಷ ಕಡಿಮೆ ಅಂದರೆ 24.01 ಲಕ್ಷ ಲಾಡು ವಿತರಿಸಲಾಗಿತ್ತು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 