ದೀಪಾ ಚೋಳನ್‌- ಹೆಚ್‌.ಎನ್‌. ಮೊಹಮ್ಮದ್ ಇಮಾಮ್ ನಿಯಾಜಿ ಭೇಟಿ

ಹೊಸಪೇಟೆ 29: ಇಂದು ಹೊಸಪೇಟೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ಜಿಲ್ಲೆಗಳ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಗಳ ಪ್ರಗತಿ ಪರೀಶೀಲನಾ ಸಭೆಗೆ ಆಗಮಿಸಿದ ಕರ್ನಾಟಕ ಸರ್ಕಾರದ ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿಗಳಾದ ದೀಪಾ ಚೋಳನ್ ರವರನ್ನು ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್‌.ಎನ್‌. ಮೊಹಮ್ಮದ್ ಇಮಾಮ್  ನಿಯಾಜಿ ರವರು ಭೇಟಿ ಮಾಡಿ ಹೂಗುಚ್ಚ ನೀಡುವ ಮೂಲಕ ಸ್ವಾಗತ ಕೋರಿದರು. 

ಇದೇ ವೇಳೆಯಲ್ಲಿ ನಗರಾಭಿವೃದ್ದಿ ಪ್ರಾಧಿಕಾರದ ಶೇ 50:50 ಅನುಪಾತದ ವಸತಿ ಯೋಜನೆಗೆ ಅನುಮತಿಗಾಗಿ ಹಾಗೂ ಹೊಸಪೇಟೆ ಸ್ಥಳೀಯ ಯೋಜನಾ ಪ್ರದೇಶಕ್ಕೆ ಮಹಾಯೋಜನೆ (ಪ-2) ಶೀಘ್ರವಾಗಿ ತಯಾರಿಸುವ ಕುರಿತು ಮತ್ತು ಪ್ರಾಧಿಕಾರ ವ್ಯಾಪ್ತಿಯ  ವಿವಿಧ ಅಭಿವದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿದರು.