ಕೆ.ಎಸ್. ಈಶ್ವರಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ: ಎಸ್ಡಿಪಿಐ
ಬೆಂಗಳೂರು, ಸೆ 16 ಮತಬ್ಯಾಂಕ್ ರಾಜಕೀಯಕ್ಕಾಗಿ ಮುಸ್ಲಿಂ ಸಮುದಾಯ ಮತ್ತು ಮಂಗಳಮುಖಿಯರನ್ನು ಅವಮಾನಿಸುವಂತಹ ಹೇಳಿಕೆ ನೀಡುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಜನಪ್ರತಿನಿಧಿಯಾಗಲು ಅನರ್ಹ. ಬಿಜೆಪಿ ಪಕ್ಷದ ಪ್ರತಿಯೊಬ್ಬ ಶಾಸಕರ ಒಂದೊಂದು ಆವಾಂತರವನ್ನು ಗಮನಿಸಿದರೆ ಇದೊಂದು ಅನಿಷ್ಟ ಪಕ್ಷ ಎಂಬುವುದು ಬಹಳ ಸ್ಪಷ್ಟವಾಗುತ್ತದೆ. ಸ್ವಾಭಿಮಾನದಿಂದ ಬದುಕುತ್ತಿರುವ ತೃತೀಯ ಲಿಂಗಿ ಸಮುದಾಯದ ಬಗ್ಗೆ ಮಾತನಾಡಲು ಬಿಜೆಪಿ ಪಕ್ಷಕ್ಕೆ ಏನು ನೈತಿಕತೆಯಿದೆ ಎಂದು ಎಸ್ಡಿಪಿಐ ಪ್ರಶ್ನಿಸಿದೆ.
ಭಾರತ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಕಾರ ಯಾರು ಯಾರಿಗೆ ಬೇಕಾದರೂ ಮತ ಹಾಕಬಹುದು ಅಥವಾ ಯಾವುದೇ ಅಭ್ಯರ್ಥಿಯು ಯಾವುದೇ ಸಮುದಾಯದ ಮತಗಳನ್ನು ಪಡೆಯಬಹುದು. ಆದರೆ ಇದರ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲದ ಈಶ್ವರಪ್ಪರ "ಮುಸಲ್ಮಾನರ ಮತ ಪಡೆಯುವ ಶಾಸಕರು ಹಿಜಿಡಾಗಳು" ಎಂಬ ಹೇಳಿಕೆ ನೀಡುವ ಮೂಲಕ ಮತ್ತೆ ತನ್ನ ಮಾನಸಿಕತೆಯನ್ನು ಪ್ರದರ್ಶಿಸಿರುತ್ತಾರೆ. ಈ ಮೂಲಕ ತಾನು ಜನಪ್ರತಿನಿಧಿಯಾಗಿರಲು ಅನರ್ಹ ಎಂಬುದನ್ನು ಧೃಢಪಡಿಸಿರುತ್ತಾರೆ ಎಂದು ಎಸ್ಡಿಪಿಐ ಪಕ್ಷದ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಪ್ರತಿಕ್ರಿಯಿಸಿದ್ದಾರೆ.
ಮಾತೆತ್ತಿದರೆ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನ ಮಾಡುವ, ಪಾಕಿಸ್ತಾನಕ್ಕೆ ಸಂಬಂಧ ಕಲ್ಪಿಸುವ ಮತ್ತು ಸುಳ್ಳು ಪ್ರಚಾರ ಮಾಡುವ ಈಶ್ವರಪ್ಪರ ಈ ಚಾಳಿಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷವು ಮಾನನಷ್ಟ ಮೊಕದ್ದಮೆ ದಾಖಲಿಸುವುದರ ಮೂಲಕ ಕಾನೂನು ಹೋರಾಟವನ್ನು ನಡೆಸುವುದಲ್ಲದೆ, ಮಂಗಳಮುಖಿಯರು ಈಶ್ವರಪ್ಪರ ವಿರುದ್ಧ ಕಾನೂನು ಹೋರಾಟ ಮಾಡುವುದಾದರೆ ನೆರವನ್ನು ನೀಡುವುದಾಗಿ ರಿಯಾಝ್ ಫರಂಗಿಪೇಟೆ ಪ್ರಕಟಣೆಯಲ್ಲಿ ಭರವಸೆ ನೀಡಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 