ವಿವಿಧ ಉಪಕರಣಗಳ ವಿತರಣೆ ವಿಳಂಬ: ಅಧಿಕಾರಿ, ಶಾಸಕರ ವಿರುದ್ಧ ಬೇಸರ
Delay in delivery of various equipment: Frustration against officials, MLAs
ಜಮಖಂಡಿ 05: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ, ತಾಲೂಕ ಪಂಚಾಯತ ಸಹಯೋಗದಲ್ಲಿ ನಡೆದ 2024-25 ನೇ ಸಾಲಿನ ವಿಶೇಷ ಚೇತನರಿಗೆ ಶೇ. 5 ರಡ್ಡಿಯಲ್ಲಿ ಯಂತ್ರ ಚಾಲಿತ ತ್ರಿಚಕ್ರ ವಾಹನ ಹಾಗೂ ಹೊಲಿಗೆ, ಬಡಗಿತನ, ಧೋಬಿ ವೃತ್ತಿಯ ಉಪಕರಣಗಳನ್ನು ವಿತರಣೆ ಸಮಾರಂಭ ಜರುಗಬೇಕಾದ ಕಾರ್ಯಕ್ರಮ ಸುಮಾರು 3 ಗಂಟೆಗಳ ಕಾಲ ವಿಳಂಬವಾದ ಹಿನ್ನಲೆಯಲ್ಲಿ ಶಾಸಕರಿಗೆ, ತಾ.ಪಂ.ಅಧಿಕಾರಿಗಳ ವಿರುದ್ಧ ವಿಶೇಷ ಚೇತನರು, ಫಲಾನುಭವಿಗಳು, ಸಾರ್ವಜನಿಕರು ಬೇಸರ ವ್ಯಕ್ತ ಪಡಿಸಿದ ಘಟನೆ ನಡೆಯಿತು.
ನಗರದ ತಾಲೂಕ ಪಂಚಾಯತ ಕಾರ್ಯಾಲಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಚೇತನರು, ವಿವಿಧ ಫಲಾನುಭವಿಗಳು ಬೆಳಗ್ಗೆ 9 ಗಂಟೆಗೆ ಆಗಮಿಸಿದರು. ಆದರೆ ಕಾರ್ಯಕ್ರಮ 3 ಗಂಟೆಗಳ ಕಾಲ ತಡವಾಗಿರುವ ಕಾರಣ ಚಿಕ್ಕ ಮಕ್ಕಳನ್ನು ತಂದಿರುವ ಮಹಿಳಾ ಫಲಾನುಭವಿಗಳು ಹಾಗೂ ವಿಶೇಷ ಚೇತನರ ಜೊತೆಗೆ ಆಗಮಿಸಿದ ಸಂಬಂಧಿಗಳು, ಸಾರ್ವಜನಿಕರು ಬಂದಿದ್ದು ಎಲ್ಲರೂ ತಾಲೂಕ ಪಂಚಾಯತ ಅಧಿಕಾರಿ ಮತ್ತು ಶಾಸಕರ ವಿರುದ್ಧ ಬೇಸರ ವ್ಯಕ್ತ ಪಡಿಸಿದರು.
ಗೊಂದಲದ ವಾತಾವರಣ : ವಿಶೇಷ ಚೇತನರಿಗೆ ಶೇ. 5ರಡ್ಡಿಯಲ್ಲಿ ಯಂತ್ರ ಚಾಲಿತ ತ್ರಿಚಕ್ರ ವಾಹನಗಳು 5 ಮಂಜೂರಾಗಿದ್ದು. ಅವುಗಳನ್ನು ಸಾಲಾಗಿ ನಿಲ್ಲಿಸಲಾಗಿತ್ತು. ತ್ರಿಚಕ್ರ ವಾಹನಗಳ ಮೇಲೆ ಯಾವುದೇ ಸ್ಟೀಕರ್ ಇಲ್ಲದೆ ನಿಲ್ಲಿಸಿದರು. ಕೆಲವು ಸಮಯದ ಬಳಿಕ ಶಾಸಕರ ಪೋಟೋ ಹೊಂದಿರುವ ಸ್ಟೀಕರ್ ಅಂಟಿಸಲು ಗೊಂದಲದ ವಾತಾವರಣ ಸೃಷ್ಠಿಯಾಗಿತು. ನಂತರ ಶಾಸಕರ ಪೋಟೋ ಹೊಂದಿರುವ ಸ್ಟೀಕರ್ಗಳನ್ನು ತ್ರಿಚಕ್ರ ವಾಹನಗಳ ಮೇಲೆ ಅಂಟಿಸಿದರು.
3 ಗಂಟೆಗಳ ಕಾಲ ತಡವಾಗಿ ಬಂದ ಶಾಸಕರು: ಶಾಸಕ ಜಗದೀಶ ಗುಡಗುಂಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ವಿಶ್ವದಲ್ಲಿ ಜನಸಂಖ್ಯೆ ಹೆಚ್ಚಾಗಿದೆ. ಎಲ್ಲರೂ ಸರಕಾರಿ ಕೆಲಸದಲ್ಲಿಯೇ ಇರಬೇಕು ಎಂಬುವದನ್ನು ಮರೆತು, ಸ್ವಯಂ ಉದ್ಯೋಗವನ್ನು ಮಾಡುವ ಗುರಿ ಹೊಂದಬೇಕು. ಕೇಂದ್ರ, ರಾಜ್ಯ ಸರಕಾರ ಸಾಕಷ್ಟು ಸ್ವಯಂ ಉದ್ಯೋಗ ಮಾಡಲಿಕ್ಕೆ ಯೋಜನೆಗಳನ್ನು ಜಾರಿಗೆ ತಂದಿದೆ. ತಮ್ಮ ಮನೆಯ ಕುಟುಂಬಗಳನ್ನು ನಿರ್ವಹಿಸಲು ಮತ್ತು ಮೊತ್ತೊಬ್ಬರನ್ನು ಬೆಳೆಸಲು ತಾವುಗಳು ಸ್ವಯಂ ಉದ್ಯೋಗ ಮಾಡಿದರೆ ಮಾತ್ರ ಮುಂದೆ ಬರಲು ಸಾಧ್ಯ. ಎಲ್ಲರಿಗೂ ಸರಕಾರಿ ನೌಕರಿ ದೊರೆಯಲು ಸಾಧ್ಯವಿಲ್ಲ. ಕೌಶಲ್ಯ ಅಭಿವೃದ್ಧಿಗೆ ಸರಕಾರ ಸೌಲಭ್ಯಗಳನ್ನು ಫಲಾನುಭವಿಗಳಿಗೆ ನೀಡಿದೆ. ಅದನ್ನು ಪಡೆದು ಸರಿಯಾಗಿ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
45 ಹೊಲಿಗೆ ಯಂತ್ರಗಳು, 13 ಬಡಿಗತನದ ಕಿಟ್ಗಳು, 9 ಧೊಬಿ ಕಿಟ್ಗಳು, 5 ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಲಾಯಿತು. ಕಲ್ಲಪ್ಪ ಬೂಸರಡ್ಡಿ ಲಿಂಗನೂರ, ಮೇಲ್ಲೇಶ ಅನುವಾಲ ಮುತ್ತೂರ, ಗೌರವ್ಬ ಹುಬ್ಬನೂರ ಗೋಠೆ, ಸುನೀಲ ರಾಂಬಳ್ಳಿ ಕಡಕೋಳ, ಶಂಕರ ತುಬಚ್ಚಿ ಶೂರ್ಾಲಿ ಇವರು ತ್ರಿಚಕ್ರ ವಾಹನಗಳನ್ನು ಪಡೆದ ಫಲಾನುಭವಿಗಳು.
ಸಹಾಯಕ ಕಾರ್ಯನಿರ್ವಹಕ ಅಧಿಕಾರಿ ಸಿದ್ದಾರ್ಥ ಗೋಠೆ, ಜಿಲ್ಲಾ ಕೈಗಾರಿಕಾ ಉಪನಿರ್ದೇಶಕ ಬಳ್ಳೂರಗಿ ಹಾಗೂ ಫಲಾನುಭವಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 