ದ್ರಾಕ್ಷಿ ಬೆಳೆಗಾರರಿಗೆ ವಿಳಂಬವಾಗುತ್ತಿದ್ದ ವಿಮಾ ಹಣ ಪಾವತಿ ಮಾಡಲು ಆರಂಭ
Delayed insurance payments to grape growers begin
ವಿಜಯಪುರ 29: ಸಂಕಷ್ಟದಲ್ಲಿರುವ ದ್ರಾಕ್ಷಿ ಬೆಳೆಗಾರರಿಗೆ ವಿಳಂಬವಾಗುತ್ತಿದ್ದ ವಿಮಾ ಹಣವನ್ನು ಪಾವತಿ ಮಾಡಲು ಆರಂಭಿಸಿರುವ ಕ್ರಮವನ್ನು ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಡಾ. ಕೆ.ಎಚ್. ಮುಂಬಾರೆಡ್ಡಿ ಸೇರಿದಂತೆ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿ ಸರ್ಕಾರಕ್ಕೆ ಧನ್ಯವಾದ ಅರ್ಿಸಿರುವ ಸಂಘಟನೆಯ ಪದಾಧಿಕಾರಿಗಳು, ಅನೇಕ ಸಮಸ್ಯೆಗಳನ್ನು ಎದುರಿಸಿದ ದ್ರಾಕ್ಷಿ ಬೆಳೆಗಾರರಿಗೆ ವಿಮಾ ಹಣ ಸಕಾಲಕ್ಕೆ ಬಾರದೇ ದೊಡ್ಡ ತೊಂದರೆ ಸೃಜಿಸಿತ್ತು. ಆದರೆ ಈಗ ದ್ರಾಕ್ಷಿ ಬೆಳೆಗಾರರ ಸಮಸ್ಯೆ ನಿವಾರಣೆಗೆ ಸರ್ಕಾರ ಮುಂದಾಗಿದ್ದು ವಿಮಾ ಹಣ ಪಾವತಿ ಆರಂಭವಾಗಿರುವುದು ಎಲ್ಲ ದ್ರಾಕ್ಷಿ ಬೆಳೆಗಾರರಿಗೂ ಸಂತೋಷ ತರಿಸಿದೆ,
ಈ ನಮ್ಮ ಹೋರಾಟ ಹಾಗೂ ನ್ಯಾಯಯುತವಾದ ಕೂಗಿಗೆ ಸ್ಪಂದಿಸಿದ ಜಿಲ್ಲೆಯ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲರಿಗೆ, ಸಚಿವ ಶಿವಾನಂದ ಪಾಟೀಲರಿಗೆ ಹಾಗೂ ಜಿಲ್ಲೆಯ ಎಲ್ಲ ಜನ ಪ್ರತಿನಿಧಿಗಳಿಗೆ, ಜಿಲ್ಲಾಧಿಕಾರಿಗಳಿಗೆ ಹಾಗೂ ತೋಟಗಾರಿಕಾ ಇಲಾಖೆಯಯ ಅಧಿಕಾರಿಗಳಿಗೆ ದ್ರಾಕ್ಷಿ ಬೆಳೆಗಾರರ ಸಂಘದ ಪದಾಧಿಕಾರಿಗಳಾದ ಭೀಮಸೇನ ಕೋಕರೆ, ಎಚ್.ಆರ್. ಉಟಗಿ, ಎಸ್.ಎಸ್. ಛಾಯಾಗೋಳ, ವಾಮನ ಮಹಿಷಿ, ಎಂ.ಆರ್. ತುಂಗಳ, ಶ್ರೀಶೈಲಗೌಡ ಪಾಟೀಲ, ಉಮೇಶ ಮಲ್ಲಣ್ಣವರ, ಸುರೇಶಗೌಡ ಬಿರಾದಾರ, ಮಹಾವೀರ ಕುಸನಾಳ, ಅಶೋಕ ಬಾಲಗಾವಿ, ವಿಶ್ವನಾಥ ಚನಾಳ ಮೊದಲಾದವರು ಅಭಿನಂದನೆ ಸಲ್ಲಿಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 