ರೇಲ್ವೆ ಸಚಿವರಿಗೆ ನಿಯೋಗದೊಂದಿಗೆ ಭೇಟಿ
Delegation meets Railway Minister
ಧಾರವಾಡ 07: ರೇಲ್ವೆ ಇಲಾಖೆಯ ಆಂತರಿಕ ನೇಮಕಾತಿಗಳಲ್ಲಿ ಮತ್ತು ಇಲಾಖಾ ಬಡ್ತಿ ಹುದ್ದೆಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶವಿಲ್ಲದ್ದನ್ನು ಕರ್ನಾಟಕ ವಿದ್ಯಾವರ್ಧಕ ಸಂಘವು ಪ್ರತಿಭಟಿಸಿ ಕೇಂದ್ರದ ರೇಲ್ವೆ ರಾಜ್ಯ ಸಚಿವ ವ್ಹಿ. ಸೋಮಣ್ಣನವರನ್ನು ಹುಬ್ಬಳ್ಳಿಯಲ್ಲಿ ಭೆಟ್ಟಿಯಾಗಿ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅವರ ನೇತೃತ್ವದಲ್ಲಿ ಕಾರಾ್ಯಧ್ಯಕ್ಷ ಬಸವಪ್ರಭು ಹೊಸಕೇರಿ, ಉಪಾಧ್ಯಕ್ಷ ಡಾ. ಸಂಜೀವ ಕುಲಕರ್ಣಿ, ಕೋಶಾಧ್ಯಕ್ಷ ಸತೀಶ ತುರಮರಿ, ಸಹ ಕಾರ್ಯದರ್ಶಿ ಶಂಕರ ಕುಂಬಿ ಹಾಗೂ ಮಹೇಂದ್ರ ಸಿಂಘಿ ಮುಂತಾದವರು ಸೇರಿ ಆಂತರಿಕ ಮತ್ತು ಬಡ್ತಿ ಸಂದರ್ಭದಲ್ಲಿ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡದ್ದರಿಂದ ರೇಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯ ಎಸಗುತ್ತಿರುವುದು ಖಂಡನೀಯ. ಪ್ರಾದೇಶಿಕ ಭಾಷಿಕರಿಗೆೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಇಲ್ಲದೇ ಹೋದಲ್ಲಿ ಹಿಂದಿಯೇತರ ಎಲ್ಲ ಭಾಷಿಕರಿಗೆ ಅನ್ಯಾಯವಾಗುತ್ತದೆ. ಕಾರಣ ಕೂಡಲೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಆದೇಶ ಹೊರಡಿಸಬೇಕೆಂದು ರೇಲ್ವೆ ಮಂತ್ರಿಗಳನ್ನು ಒತ್ತಾಯಿಸಿ ನಿಯೋಗದೊಂದಿಗೆ ಮನವಿಯನ್ನು ಸಂಘವು ಮಂತ್ರಿಗಳಿಗೆ ಸಲ್ಲಿಸಿತು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 