ರೇಲ್ವೆ ಸಚಿವರಿಗೆ ನಿಯೋಗದೊಂದಿಗೆ ಭೇಟಿ
Delegation meets Railway Minister
ಧಾರವಾಡ 07: ರೇಲ್ವೆ ಇಲಾಖೆಯ ಆಂತರಿಕ ನೇಮಕಾತಿಗಳಲ್ಲಿ ಮತ್ತು ಇಲಾಖಾ ಬಡ್ತಿ ಹುದ್ದೆಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶವಿಲ್ಲದ್ದನ್ನು ಕರ್ನಾಟಕ ವಿದ್ಯಾವರ್ಧಕ ಸಂಘವು ಪ್ರತಿಭಟಿಸಿ ಕೇಂದ್ರದ ರೇಲ್ವೆ ರಾಜ್ಯ ಸಚಿವ ವ್ಹಿ. ಸೋಮಣ್ಣನವರನ್ನು ಹುಬ್ಬಳ್ಳಿಯಲ್ಲಿ ಭೆಟ್ಟಿಯಾಗಿ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅವರ ನೇತೃತ್ವದಲ್ಲಿ ಕಾರಾ್ಯಧ್ಯಕ್ಷ ಬಸವಪ್ರಭು ಹೊಸಕೇರಿ, ಉಪಾಧ್ಯಕ್ಷ ಡಾ. ಸಂಜೀವ ಕುಲಕರ್ಣಿ, ಕೋಶಾಧ್ಯಕ್ಷ ಸತೀಶ ತುರಮರಿ, ಸಹ ಕಾರ್ಯದರ್ಶಿ ಶಂಕರ ಕುಂಬಿ ಹಾಗೂ ಮಹೇಂದ್ರ ಸಿಂಘಿ ಮುಂತಾದವರು ಸೇರಿ ಆಂತರಿಕ ಮತ್ತು ಬಡ್ತಿ ಸಂದರ್ಭದಲ್ಲಿ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡದ್ದರಿಂದ ರೇಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯ ಎಸಗುತ್ತಿರುವುದು ಖಂಡನೀಯ. ಪ್ರಾದೇಶಿಕ ಭಾಷಿಕರಿಗೆೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಇಲ್ಲದೇ ಹೋದಲ್ಲಿ ಹಿಂದಿಯೇತರ ಎಲ್ಲ ಭಾಷಿಕರಿಗೆ ಅನ್ಯಾಯವಾಗುತ್ತದೆ. ಕಾರಣ ಕೂಡಲೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಆದೇಶ ಹೊರಡಿಸಬೇಕೆಂದು ರೇಲ್ವೆ ಮಂತ್ರಿಗಳನ್ನು ಒತ್ತಾಯಿಸಿ ನಿಯೋಗದೊಂದಿಗೆ ಮನವಿಯನ್ನು ಸಂಘವು ಮಂತ್ರಿಗಳಿಗೆ ಸಲ್ಲಿಸಿತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 