ಗಂಗಾವತಿ-ದರೋಜಿ ರೈಲ್ವೆ ಮಾರ್ಗದ ಅನುದಾನ ಕೋರಿ ರಾಜ್ಯ ರೈಲ್ವೆ ಸಚಿವರ ಬಳಿ ನಿಯೋಗ
Delegation to the State Railway Minister seeking grant of Gangavati-Daroji railway line
ಗಂಗಾವತಿ-ದರೋಜಿ ರೈಲ್ವೆ ಮಾರ್ಗದ ಅನುದಾನ ಕೋರಿ ರಾಜ್ಯ ರೈಲ್ವೆ ಸಚಿವರ ಬಳಿ ನಿಯೋಗ
ಕಂಪ್ಲಿ 23: ಇಲ್ಲಿನ ಶಿವಶಕ್ತಿ ಅಕ್ಕಿಗಿರಣಿ ಆವರಣದಲ್ಲಿ ಶುಕ್ರವಾರ ಕಂಪ್ಲಿ ತಾಲೂಕು ರೈಲ್ವೆ ಮಾರ್ಗಕ್ಕಾಗಿ ಕ್ರಿಯಾ ಸಮಿತಿ ಸದಸ್ಯರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆವಹಿಸಿ ಕಂಪ್ಲಿ ತಾಲೂಕು ರೈಲ್ವೆ ಮಾರ್ಗಕ್ಕಾಗಿ ಕ್ರಿಯಾ ಸಮಿತಿ ಅಧ್ಯಕ್ಷ ಕೆ.ಎಂ.ಹೇಮಯ್ಯಸ್ವಾಮಿ ಮಾತನಾಡಿ, ಕಂಪ್ಲಿ ಮೂಲಕ ಗಂಗಾವತಿ-ದರೋಜಿ ಬ್ರಾಡ್ಗೇಜ್ ರೈಲ್ವೆ ಸಂಪರ್ಕ ಕಾಮಗಾರಿ ಸಮೀಕ್ಷೆ ಪೂರ್ಣಗೊಳಿಸಿ, 919.49ಕೋಟಿ ರೂಪಾಯಿಗಳ ಅಂದಾಜಿಸಿದೆ. ರಾಜ್ಯ ಸರ್ಕಾರ ಬಜೆಟ್ನಲ್ಲಿ ತನ್ನ ಪಾಲನ್ನು ಮೀಸಲಿಡಬೇಕಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ತನ್ನ ಪಾಲನ್ನು ಬಿಡುಗಡೆಗೊಳಿಸಬೇಕಿದೆ. ಈ ಹಿನ್ನಲೆಯಲ್ಲಿ ಕಂಪ್ಲಿ ಮೂಲಕ ಗಂಗಾವತಿ-ದರೋಜಿ ರೈಲ್ವೆ ಸಂಪರ್ಕ ಕಾಮಗಾರಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಲು ಸಿಎಂ ಮತ್ತು ರಾಜ್ಯ ರೈಲ್ವೆ ಸಚಿವರ ಬಳಿ ನಿಯೋಗ ತೆರಳಿ ಅನುದಾನ ಬಿಡುಗಡೆಗೆ ಒತ್ತಾಯಿಸಲಾಗುವುದು ಎಂದರು. ಸಮಿತಿ ಪದಾಧಿಕಾರಿಗಳಾದ ನಾರಾಯಣ ಇಂಗಳಗಿ, ಹಾದಿಮನಿ ಕಾಳಿಂಗವರ್ಧನ, ಎಸ್.ಡಿ.ಬಸವರಾಜ, ಅಯ್ಯೋದಿ ವೆಂಕಟೇಶ, ಇಟಗಿ ವಿರುಪಾಕ್ಷಿ, ಮಡಿವಾಳರ ಹುಲುಗಪ್ಪ, ಬಂಗಿ ದೊಡ್ಡ ಮಂಜುನಾಥ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 