ಮರಣ ಹೊಂದಿದವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿ: ಬಿ.ಎಸ್ ಹಿರೇಮಠ್
Delete the names of the deceased from the electoral roll: B.S. Hiremath
ಮತದಾರ ಪಟ್ಟಿಯ ಪ್ರಗತಿ ಪರೀಶೀಲನ ಸಭೆ
ಕೊಪ್ಪಳ 25: ಮರಣ ಹೊಂದಿರುವ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವಂತೆ ಬೆಂಗಳೂರು ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿಯ ಸೀನಿಯರ್ ಕನ್ಸಲ್ಟೆಂಟ್ ಬಿ.ಎಸ್ ಹಿರೇಮಠ ಹೇಳಿದರು.
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿಯ ಕೆಸ್-1 ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಕೊಪ್ಪಳ ಜಿಲ್ಲೆಯ ನಡೆದ ಮತದಾರ ಪಟ್ಟಿ ಪ್ರಗತಿ ಪರೀಶೀಲನೆ ನಡೆಸಿದರು. ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ಮರಣ ಹೊಂದಿರುವ ಮತದಾರರ ಹೆಸರು ತೆಗೆದು ಹಾಕಿರುವ ಕುರಿತು ಪರೀಶೀಲಿಸಿದರು ಹಾಗೂ ಜಿಲ್ಲಾ ಮಟ್ಟದ ಚುನಾವಣಾ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನವನ್ನು ನೀಡಿದರು.
ಈ ಸಭೆಯಲ್ಲಿ ಕೊಪ್ಪಳ ಅಪಾರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ, ಜಿ.ಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಮುಖ್ಯ ಯೋಜನಾಧಿಕಾರಿ ಮಂಜುನಾಥ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಗಳ ತಹಶಿಲ್ದಾರರು, ಇತರೆ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 