ಕ್ರೌಡ್ ಫಂಡಿಂಗ್ ಅಭಿಯಾನ ಆರಂಭಿಸಿದ ದೆಹಲಿ ಮುಖ್ಯಮಂತ್ರಿ ಆತಿಶಿ
Delhi Chief Minister Atishi started the crowd funding campaign
ನವದೆಹಲಿ 12: ವಿಧಾನಸಭಾ ಚುನಾವಣೆಗಾಗಿ ₹40 ಲಕ್ಷ ಸಂಗ್ರಹಿಸಲು ಕ್ರೌಡ್ ಫಂಡಿಂಗ್ ಅಭಿಯಾನವನ್ನು ದೆಹಲಿ ಮುಖ್ಯಮಂತ್ರಿ ಆತಿಶಿ ಅವರು ಇಂದು ಆರಂಭಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಾಜಕೀಯ ಪಯಣದುದ್ದಕ್ಕೂ, ದೊಡ್ಡ ಉದ್ಯಮಿಗಳಿಗಿಂತ ಸಾಮಾನ್ಯ ನಾಗರಿಕರ ಬೆಂಬಲವೇ ಪ್ರಚಾರದ ಮೂಲಾಧಾರವಾಗಿದೆ ಎಂದು ಹೇಳಿದ್ದಾರೆ.
2013ರಲ್ಲಿ ನಾವು ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದಾಗ, ಜನರಿಂದ ದೇಣಿಗೆಗಳನ್ನು ಪಡೆಯಲು ಮನೆ-ಮನೆಗೆ ಹೋಗಿದ್ದೆವು. ಬೀದಿಗಳಲ್ಲೇ ಸಭೆಗಳನ್ನು ನಡೆಸುತ್ತಿದ್ದೆವು. ಸಭೆ ನಂತರ ಒಂದು ಬಟ್ಟೆಯನ್ನು ಹರಡುತ್ತಿದ್ದೆವು. ಜನರು ₹10, ₹50, ₹100ರಂತೆ ತಮ್ಮ ಕೈಲಾದಷ್ಟು ಕೊಡುಗೆ ನೀಡುತ್ತಿದ್ದರು. ಯಾವುದೇ ಕಾರ್ಪೊರೇಟ್ ಅಥವಾ ವ್ಯಾಪಾರ ಸಂಬಂಧಗಳಿಂದ ಮುಕ್ತವಾಗಿ ಪ್ರಾಮಾಣಿಕ ಪ್ರಚಾರವನ್ನು ನಡೆಸಲು ಈ ವಿಧಾನವು ನಮಗೆ ನೆರವಾಗುತ್ತದೆ’ ಎಂದು ತಿಳಿಸಿದ್ದಾರೆ.
ಜನರಿಂದ ಸಣ್ಣ ದೇಣಿಗೆಗಳು ರಾಜಕೀಯಕ್ಕೆ ಪಕ್ಷದ ಪ್ರಾಮಾಣಿಕ ವಿಧಾನವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ, ಕಾರ್ಪೊರೇಟ್ ದೇಣಿಗೆಗಳನ್ನು ಅವಲಂಬಿಸಿರುವ ಮತ್ತು ವ್ಯಾಪಾರದ ಹಿತಾಸಕ್ತಿಗಳನ್ನು ಹೊಂದಿರುವ ಇತರ ಪಕ್ಷಗಳಿಗಿಂತ ನಾವು ಭಿನ್ನವಾಗಿದ್ದೇವೆ ಎಂದು ಆತಿಶಿ ಅವರು ಆಮ್ ಆದ್ಮಿ ಪಕ್ಷದ ಆರಂಭಿಕ ದಿನಗಳನ್ನು ನೆನಪಿಸಿಕೊಂಡಿದ್ದಾರೆ.
ಈ ಬಾರಿಯ ವಿಧಾನಸಭಾ ಚುನಾವಣೆಗಾಗಿ ಕ್ರೌಡ್ ಫಂಡಿಂಗ್ ಅಭಿಯಾನವನ್ನು ಆರಂಭಿಸಲಾಗಿದೆ. ಇದರೊಂದಿಗೆ ₹40 ಲಕ್ಷ ಸಂಗ್ರಹಿಸುವ ಗುರಿಯನ್ನು ಹೊಂದಿದ್ದೇವೆ. ಚುನಾವಣಾ ಪ್ರಚಾರಕ್ಕೆ ಹಣದ ಅಗತ್ಯತೆ ಇರುವುದರಿಂದ ಸಾರ್ವಜನಿಕರು ತಮ್ಮ ಕೈಲಾದಷ್ಟು ಕೊಡುಗೆ ನೀಡುವಂತೆ ಮನವಿ ಮಾಡಿದ್ದಾರೆ.
ಆಸಕ್ತರು atishi.aamaadmiparty.org ನಲ್ಲಿ ಲಗತ್ತಿಸುರುವ ಲಿಂಕ್ ಮೂಲಕ ದೇಣಿಗೆ ನೀಡಬಹುದು ಎಂದು ಆತಿಶಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 