೨ ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಸಿಬಿಐ ಬಲೆಗೆ ಬಿದ್ದ ದೆಹಲಿ ಡಿಸಿಎಂ ಓ ಎಸ್ ಡಿ
ನವದೆಹಲಿ, ಫೆ೭, ದೆಹಲಿ ವಿಧಾನಸಭಾ ಚುನಾವಣೆಗೆ ಮತದಾನ ಸಮೀಪಿಸುತ್ತಿರುವಂತೆಯೇ ದೆಹಲಿ ಉಪ ಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಬಳಿ ಓ ಎಸ್ ಡಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಗೋಪಾಲಕೃಷ್ಣ ಮಾಧವ್, ವ್ಯಕ್ತಿಯೊಬ್ಬರಿಂದ ೨ ಲಕ್ಷ ರೂ ಹಣವನ್ನು ಲಂಚ ಪಡೆಯುತ್ತಿದ್ದಾಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಲಂಚದ ಹಣದ ಸಮೇತ ಸೆರೆ ಹಿಡಿದಿದ್ದಾರೆ. ಅಂಡಮಾನ್ ನಿಕೋಬಾರ್ ಡಿಯು ಡಮನ್ ನಾಗರೀಕ ಸೇವೆಗಳಿಗೆ ಸೇರಿದ ಆಧಿಕಾರಿಯಾಗಿರುವ ಆರೋಪಿ ಗೋಪಾಲಕೃಷ್ಣ ಮಾಧವ್, ಒಬ್ಬ ವ್ಯಕ್ತಿಯಿಂದ ೨ ಲಕ್ಷರೂಪಾಯಿ ಪಡೆದುಕೊಳ್ಳುತ್ತಿದ್ದ ವೇಳೆ ಸಿಬಿಐ ಅಧಿಕಾರಿಗಳು ಸೆರೆಹಿಡಿದಿದ್ದಾರೆ. ಆರೋಪಿಯನ್ನು ಸಿಬಿಐ ಅಧಿಕಾರಿಗಳು ಕೇಂದ್ರ ಕಚೇರಿಯಲ್ಲಿ ಪ್ರಶ್ನಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಪಾತ್ರ ಇದೆಯೇ ಎಂಬುದನ್ನು ಸಿಬಿಐ ಅಧಿಕಾರಿಗಳು ವಿಚಾರಿಸುತ್ತಿದ್ದಾರೆ. ೨೦೧೫ ರಲ್ಲಿ ದೆಹಲಿಯ ಉಪ ಮುಖ್ಯಮಂತ್ರಿ ಓ ಎಸ್ ಡಿ ಯಾಗಿ ನೇಮಕಗೊಂಡಿದ್ದ ಗೋಪಾಲಕೃಷ್ಣ ಅವರನ್ನು ಚುನಾವಣೆಯ ಸಂದರ್ಭದಲ್ಲಿ ಬಂಧಿಸಿರುವುದು ತೀವ್ರ ಚರ್ಚೆಯ ವಿಷಯವಾಗಿದೆ. ಮನೀಶ್ ಸಿಸೋಡಿಯಾ ವಿರುದ್ದ ಜಾಮಿಯಾ ಮಿಲಿಯಾ ಬಳಿ ಬಸ್ಸಿಗೆ ಬೆಂಕಿ ಹಚ್ಚಿದ್ದ ಪ್ರಕರಣವನ್ನು ಈ ಮೊದಲು ದೆಹಲಿ ಪೊಲೀಸರು ದಾಖಲಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 