೨ ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಸಿಬಿಐ ಬಲೆಗೆ ಬಿದ್ದ ದೆಹಲಿ ಡಿಸಿಎಂ ಓ ಎಸ್ ಡಿ
ನವದೆಹಲಿ, ಫೆ೭, ದೆಹಲಿ ವಿಧಾನಸಭಾ ಚುನಾವಣೆಗೆ ಮತದಾನ ಸಮೀಪಿಸುತ್ತಿರುವಂತೆಯೇ ದೆಹಲಿ ಉಪ ಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಬಳಿ ಓ ಎಸ್ ಡಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಗೋಪಾಲಕೃಷ್ಣ ಮಾಧವ್, ವ್ಯಕ್ತಿಯೊಬ್ಬರಿಂದ ೨ ಲಕ್ಷ ರೂ ಹಣವನ್ನು ಲಂಚ ಪಡೆಯುತ್ತಿದ್ದಾಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಲಂಚದ ಹಣದ ಸಮೇತ ಸೆರೆ ಹಿಡಿದಿದ್ದಾರೆ. ಅಂಡಮಾನ್ ನಿಕೋಬಾರ್ ಡಿಯು ಡಮನ್ ನಾಗರೀಕ ಸೇವೆಗಳಿಗೆ ಸೇರಿದ ಆಧಿಕಾರಿಯಾಗಿರುವ ಆರೋಪಿ ಗೋಪಾಲಕೃಷ್ಣ ಮಾಧವ್, ಒಬ್ಬ ವ್ಯಕ್ತಿಯಿಂದ ೨ ಲಕ್ಷರೂಪಾಯಿ ಪಡೆದುಕೊಳ್ಳುತ್ತಿದ್ದ ವೇಳೆ ಸಿಬಿಐ ಅಧಿಕಾರಿಗಳು ಸೆರೆಹಿಡಿದಿದ್ದಾರೆ. ಆರೋಪಿಯನ್ನು ಸಿಬಿಐ ಅಧಿಕಾರಿಗಳು ಕೇಂದ್ರ ಕಚೇರಿಯಲ್ಲಿ ಪ್ರಶ್ನಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಪಾತ್ರ ಇದೆಯೇ ಎಂಬುದನ್ನು ಸಿಬಿಐ ಅಧಿಕಾರಿಗಳು ವಿಚಾರಿಸುತ್ತಿದ್ದಾರೆ. ೨೦೧೫ ರಲ್ಲಿ ದೆಹಲಿಯ ಉಪ ಮುಖ್ಯಮಂತ್ರಿ ಓ ಎಸ್ ಡಿ ಯಾಗಿ ನೇಮಕಗೊಂಡಿದ್ದ ಗೋಪಾಲಕೃಷ್ಣ ಅವರನ್ನು ಚುನಾವಣೆಯ ಸಂದರ್ಭದಲ್ಲಿ ಬಂಧಿಸಿರುವುದು ತೀವ್ರ ಚರ್ಚೆಯ ವಿಷಯವಾಗಿದೆ. ಮನೀಶ್ ಸಿಸೋಡಿಯಾ ವಿರುದ್ದ ಜಾಮಿಯಾ ಮಿಲಿಯಾ ಬಳಿ ಬಸ್ಸಿಗೆ ಬೆಂಕಿ ಹಚ್ಚಿದ್ದ ಪ್ರಕರಣವನ್ನು ಈ ಮೊದಲು ದೆಹಲಿ ಪೊಲೀಸರು ದಾಖಲಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 