೨ ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಸಿಬಿಐ ಬಲೆಗೆ ಬಿದ್ದ ದೆಹಲಿ ಡಿಸಿಎಂ ಓ ಎಸ್ ಡಿ
ನವದೆಹಲಿ, ಫೆ೭, ದೆಹಲಿ ವಿಧಾನಸಭಾ ಚುನಾವಣೆಗೆ ಮತದಾನ ಸಮೀಪಿಸುತ್ತಿರುವಂತೆಯೇ ದೆಹಲಿ ಉಪ ಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಬಳಿ ಓ ಎಸ್ ಡಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಗೋಪಾಲಕೃಷ್ಣ ಮಾಧವ್, ವ್ಯಕ್ತಿಯೊಬ್ಬರಿಂದ ೨ ಲಕ್ಷ ರೂ ಹಣವನ್ನು ಲಂಚ ಪಡೆಯುತ್ತಿದ್ದಾಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಲಂಚದ ಹಣದ ಸಮೇತ ಸೆರೆ ಹಿಡಿದಿದ್ದಾರೆ. ಅಂಡಮಾನ್ ನಿಕೋಬಾರ್ ಡಿಯು ಡಮನ್ ನಾಗರೀಕ ಸೇವೆಗಳಿಗೆ ಸೇರಿದ ಆಧಿಕಾರಿಯಾಗಿರುವ ಆರೋಪಿ ಗೋಪಾಲಕೃಷ್ಣ ಮಾಧವ್, ಒಬ್ಬ ವ್ಯಕ್ತಿಯಿಂದ ೨ ಲಕ್ಷರೂಪಾಯಿ ಪಡೆದುಕೊಳ್ಳುತ್ತಿದ್ದ ವೇಳೆ ಸಿಬಿಐ ಅಧಿಕಾರಿಗಳು ಸೆರೆಹಿಡಿದಿದ್ದಾರೆ. ಆರೋಪಿಯನ್ನು ಸಿಬಿಐ ಅಧಿಕಾರಿಗಳು ಕೇಂದ್ರ ಕಚೇರಿಯಲ್ಲಿ ಪ್ರಶ್ನಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಪಾತ್ರ ಇದೆಯೇ ಎಂಬುದನ್ನು ಸಿಬಿಐ ಅಧಿಕಾರಿಗಳು ವಿಚಾರಿಸುತ್ತಿದ್ದಾರೆ. ೨೦೧೫ ರಲ್ಲಿ ದೆಹಲಿಯ ಉಪ ಮುಖ್ಯಮಂತ್ರಿ ಓ ಎಸ್ ಡಿ ಯಾಗಿ ನೇಮಕಗೊಂಡಿದ್ದ ಗೋಪಾಲಕೃಷ್ಣ ಅವರನ್ನು ಚುನಾವಣೆಯ ಸಂದರ್ಭದಲ್ಲಿ ಬಂಧಿಸಿರುವುದು ತೀವ್ರ ಚರ್ಚೆಯ ವಿಷಯವಾಗಿದೆ. ಮನೀಶ್ ಸಿಸೋಡಿಯಾ ವಿರುದ್ದ ಜಾಮಿಯಾ ಮಿಲಿಯಾ ಬಳಿ ಬಸ್ಸಿಗೆ ಬೆಂಕಿ ಹಚ್ಚಿದ್ದ ಪ್ರಕರಣವನ್ನು ಈ ಮೊದಲು ದೆಹಲಿ ಪೊಲೀಸರು ದಾಖಲಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 